Featured

ನ.18ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ – Vishwanews24

ನ.18ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ

ಮಂಗಳೂರು: ‘ಉದ್ಯಮಶೀಲತೆ ಸಾರ್ವಜನಿಕ-ಖಾಸಗಿ-ಸಹಕಾರಿ ಸಹಭಾಗಿತ್ವವನ್ನು ಬಲಗೊಳಿಸುವುದು’ ಎಂಬ ಧೇಯದೊಂದಿಗೆ ರಾಜ್ಯಮಟ್ಟದ ಸಹಕಾರ ಸಪ್ತಾಹ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ‘ಕರಾವಳಿ ಉತ್ಸವ’ ಮೈದಾನದಲ್ಲಿ ನ. 18ರಂದು ಜರಗಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬೆಳಗ್ಗೆ 10ಕ್ಕೆ ಕಾರಕ್ರಮ ಆರಂಭವಾ ಗಲಿದೆ. ಬೆಳಗ್ಗೆ 9ಕ್ಕೆ ‘ಸಹಕಾರ ಸಂಘ, ಸಂಸ್ಥೆಗಳ ಪ್ರತಿನಿಧಿಗಳ ಸಹಕಾರ ಜಾಥಾ’ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್, ಸೌಹಾರ್ದ ಸಹಕಾರಿಗಳು ಹಾಗೂ ಎಲ್ಲ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.

ಸಚಿವರಿಂದ ಉದ್ಘಾಟನೆ ಸಹಕಾರ ಸಪ್ತಾಹವನ್ನು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಉದ್ಘಾಟಿಸುವರು. ರಾಜ್ಯಮಟ್ಟದ ಶೆಟ್ಟಿ ‘ಸಹಕಾರ ರತ್ನ ಪ್ರಶಸ್ತಿಯನ್ನು ಸಚಿವ ವಿ. ಸುನಿಲ್ ಕುಮಾರ್ ಪ್ರದಾನ ಅಧ ಮಾಡಲಿರುವರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಅಧ್ಯಕ್ಷತೆ ಪ ವಹಿಸಲಿರುವರು. ಕರ್ನಾಟಕ ರಾಜ್ಯ ಕಳ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಜಿ ಡಾ|ಎಂ.ಎನ್. ರಾಜೇಂದ್ರ ಕುಮಾರ್ ‘ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಶ ಪ್ರದಾನ’ ಮಾಡಲಿರುವರು. ಸಹಕಾರ ಸ ಸಪ್ತಾಹದ ಧ್ವಜಾರೋಹಣವನ್ನು ಪ ಶಾಸಕ ವೇದವ್ಯಾಸ ಡಿ. ಕಾಮತ್ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಯು.ಟಿ. ಖಾದರ್, ಡಾ| ವೈ, ಭರತ್ ಶೆಟ್ಟಿ ಹಾಗೂ ಮೇಯರ್‌’ ಜಯಾನಂದ ಅಂಚನ್ ಭಾಗವಹಿಸಲಿರುವರು.

ಕ್ಯಾಂಪೋ ಸಂಸೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ದ.ಕ. ಜಿಲ್ಲಾ ಸಹಕಾರಿ ಉತ್ಪಾದಕರ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ದ.ಕ. ಮತ್ತು ಉಡುಪಿ ಜಿಲ್ಲಾ ಸದಾಶಿ ಮೀನುಗಾರರ ಮಹಾಮಂಡಳ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ಗೌರವ ಉಪಸ್ಥಿತರಿರುವರು. ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ, ಸಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್‌.. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್‌ ಭಾಗವಹಿಸಲಿರುವರು.

ಕುಂದಾಪುರ: ಶಾಲಾ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್‌ ಹಾಗೂ ಬಾಂಗ್‌..✴️ ಶಾಲಾಡಳಿತದ ವಿರುದ್ಧ ಹಿಂ.ಜಾಗರಣದಿಂದ ಪ್ರತಿಭಟನೆ – Vishwanews24

ಸಹಕಾರ ರತ್ನ ಪ್ರಶಸ್ತಿ ಪ್ರದಾನ
ಕರ್ನಾಟಕ ಸರಕಾರ ರಾಜ್ಯ ಮಟ್ಟದಲ್ಲಿ ನೀಡುವ ‘ಸಹಕಾರ ರತ್ನ ಪ್ರಶಸ್ತಿಯನ್ನು ಕೊಂಕೋಡಿ ಪದ್ಮನಾಭ, ನಿತ್ಯಾನಂದ ಮುಂಡೋಡಿ ದಂಬೆಕಾನ ಸದಾಶಿವ ರೈ, ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಯಶ್ಪಾಲ್ ಸುವರ್ಣ ಅವರಿಗೆ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಹಕಾರಿ ರಾಜೇಂದ್ರ ಕುಮಾರ್ ತಿಳಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ ಜಿಲ್ಲಾ ಯೂನಿಯನ್ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ,_ಬ್ಯಾಂಕಿನ ನಿರ್ದೇಶಕರಾದ ಬಿ. ನಿರಂಜನ್, ಟಿ.ಜಿ. ರಾಜಾರಾಮ್ ಭಟ್, ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್.ಬಿ. ಜಯರಾಮ ರೈ, ಶಶಿಕುಮಾರ್ ರೈ ಬಾಲ್ಯೂಟ್ಟು ಭಾಸ್ಕರ್ ಎಸ್. ಕೋಟ್ಯಾನ್, ರಾಜೇಶ್ ರಾವ್, ರಾಜು ಪೂಜಾರಿ, ಅಶೋಕ್ ಕುಮಾರ್ ಶೆಟ್ಟಿ ಸದಾಶಿವ ಉಳ್ಳಾಲ, ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್, ಸಹಾಯಕ ನಿಬಂಧಕ ಸುಧೀರ್ ಕುಮಾರ್‌ ಉಪಸ್ಥಿತರಿದ್ದರು,
ಸಹಕಾರ ಜಾಥಾ
ಎಸ್‌ಸಿಡಿಸಿಸಿ ಬ್ಯಾಂಕಿನ ಆವರಣದಿಂದ ಕರಾವಳಿ ಉತ್ಸವ ಮೈದಾನದವರೆಗೆ ಸಹಕಾರಿಗಳು ವಾಹನದ ಮೂಲಕ ಸಹಕಾರ ಜಾಥಾ’ ದಲ್ಲಿ ಭಾಗವಹಿಸಲಿದ್ದು ಸುಮಾರು 900 ಚತುಷ್ಕಕ್ರ ವಾಹನಗಳು ಪಾಲ್ಗೊಳ್ಳಲಿವೆ. ಸಹಕಾರ ಆಂದೋಲನದ ಮೂಲಪುರುಷ ಮೊಳಹಳ್ಳಿ ಶಿವರಾವ್‌ ಅವರನ್ನು ಸ್ಮರಿಸುವ ಹಾಗೂ ಸಹಕಾರ ಚಳವಳಿಯನ್ನು ಪ್ರತಿಬಿಂಬಿಸುವ ಆಕರ್ಷಕ ಟ್ಯಾಬ್ಲೊಗಳು, ಹೊನ್ನಾವರ ಬ್ಯಾಂಡ್ ಸೇರಿದಂತೆ ವಿವಿಧ ಕಲಾ ತಂಡಗಳ ಸಂಯೋಜನೆಯಲ್ಲಿ ಸಹಕಾರ ಜಾಥಾ’ ನಡೆಯಲಿದೆ ಎಂದು ಡಾ| ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago