ಮಂಗಳೂರು: ‘ಉದ್ಯಮಶೀಲತೆ ಸಾರ್ವಜನಿಕ-ಖಾಸಗಿ-ಸಹಕಾರಿ ಸಹಭಾಗಿತ್ವವನ್ನು ಬಲಗೊಳಿಸುವುದು’ ಎಂಬ ಧೇಯದೊಂದಿಗೆ ರಾಜ್ಯಮಟ್ಟದ ಸಹಕಾರ ಸಪ್ತಾಹ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ‘ಕರಾವಳಿ ಉತ್ಸವ’ ಮೈದಾನದಲ್ಲಿ ನ. 18ರಂದು ಜರಗಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ 10ಕ್ಕೆ ಕಾರಕ್ರಮ ಆರಂಭವಾ ಗಲಿದೆ. ಬೆಳಗ್ಗೆ 9ಕ್ಕೆ ‘ಸಹಕಾರ ಸಂಘ, ಸಂಸ್ಥೆಗಳ ಪ್ರತಿನಿಧಿಗಳ ಸಹಕಾರ ಜಾಥಾ’ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್ಸಿಡಿಸಿಸಿ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್, ಸೌಹಾರ್ದ ಸಹಕಾರಿಗಳು ಹಾಗೂ ಎಲ್ಲ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.
ಸಚಿವರಿಂದ ಉದ್ಘಾಟನೆ ಸಹಕಾರ ಸಪ್ತಾಹವನ್ನು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಉದ್ಘಾಟಿಸುವರು. ರಾಜ್ಯಮಟ್ಟದ ಶೆಟ್ಟಿ ‘ಸಹಕಾರ ರತ್ನ ಪ್ರಶಸ್ತಿಯನ್ನು ಸಚಿವ ವಿ. ಸುನಿಲ್ ಕುಮಾರ್ ಪ್ರದಾನ ಅಧ ಮಾಡಲಿರುವರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಅಧ್ಯಕ್ಷತೆ ಪ ವಹಿಸಲಿರುವರು. ಕರ್ನಾಟಕ ರಾಜ್ಯ ಕಳ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಜಿ ಡಾ|ಎಂ.ಎನ್. ರಾಜೇಂದ್ರ ಕುಮಾರ್ ‘ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಶ ಪ್ರದಾನ’ ಮಾಡಲಿರುವರು. ಸಹಕಾರ ಸ ಸಪ್ತಾಹದ ಧ್ವಜಾರೋಹಣವನ್ನು ಪ ಶಾಸಕ ವೇದವ್ಯಾಸ ಡಿ. ಕಾಮತ್ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಯು.ಟಿ. ಖಾದರ್, ಡಾ| ವೈ, ಭರತ್ ಶೆಟ್ಟಿ ಹಾಗೂ ಮೇಯರ್’ ಜಯಾನಂದ ಅಂಚನ್ ಭಾಗವಹಿಸಲಿರುವರು.
ಕ್ಯಾಂಪೋ ಸಂಸೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ದ.ಕ. ಜಿಲ್ಲಾ ಸಹಕಾರಿ ಉತ್ಪಾದಕರ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ದ.ಕ. ಮತ್ತು ಉಡುಪಿ ಜಿಲ್ಲಾ ಸದಾಶಿ ಮೀನುಗಾರರ ಮಹಾಮಂಡಳ ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ ಗೌರವ ಉಪಸ್ಥಿತರಿರುವರು. ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ, ಸಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭಾಗವಹಿಸಲಿರುವರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…