Featured

ನ.18ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ – Vishwanews24

ನ.18ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ

ಮಂಗಳೂರು: ‘ಉದ್ಯಮಶೀಲತೆ ಸಾರ್ವಜನಿಕ-ಖಾಸಗಿ-ಸಹಕಾರಿ ಸಹಭಾಗಿತ್ವವನ್ನು ಬಲಗೊಳಿಸುವುದು’ ಎಂಬ ಧೇಯದೊಂದಿಗೆ ರಾಜ್ಯಮಟ್ಟದ ಸಹಕಾರ ಸಪ್ತಾಹ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ‘ಕರಾವಳಿ ಉತ್ಸವ’ ಮೈದಾನದಲ್ಲಿ ನ. 18ರಂದು ಜರಗಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬೆಳಗ್ಗೆ 10ಕ್ಕೆ ಕಾರಕ್ರಮ ಆರಂಭವಾ ಗಲಿದೆ. ಬೆಳಗ್ಗೆ 9ಕ್ಕೆ ‘ಸಹಕಾರ ಸಂಘ, ಸಂಸ್ಥೆಗಳ ಪ್ರತಿನಿಧಿಗಳ ಸಹಕಾರ ಜಾಥಾ’ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್, ಸೌಹಾರ್ದ ಸಹಕಾರಿಗಳು ಹಾಗೂ ಎಲ್ಲ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.

ಸಚಿವರಿಂದ ಉದ್ಘಾಟನೆ ಸಹಕಾರ ಸಪ್ತಾಹವನ್ನು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಉದ್ಘಾಟಿಸುವರು. ರಾಜ್ಯಮಟ್ಟದ ಶೆಟ್ಟಿ ‘ಸಹಕಾರ ರತ್ನ ಪ್ರಶಸ್ತಿಯನ್ನು ಸಚಿವ ವಿ. ಸುನಿಲ್ ಕುಮಾರ್ ಪ್ರದಾನ ಅಧ ಮಾಡಲಿರುವರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಅಧ್ಯಕ್ಷತೆ ಪ ವಹಿಸಲಿರುವರು. ಕರ್ನಾಟಕ ರಾಜ್ಯ ಕಳ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಜಿ ಡಾ|ಎಂ.ಎನ್. ರಾಜೇಂದ್ರ ಕುಮಾರ್ ‘ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಶ ಪ್ರದಾನ’ ಮಾಡಲಿರುವರು. ಸಹಕಾರ ಸ ಸಪ್ತಾಹದ ಧ್ವಜಾರೋಹಣವನ್ನು ಪ ಶಾಸಕ ವೇದವ್ಯಾಸ ಡಿ. ಕಾಮತ್ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಯು.ಟಿ. ಖಾದರ್, ಡಾ| ವೈ, ಭರತ್ ಶೆಟ್ಟಿ ಹಾಗೂ ಮೇಯರ್‌’ ಜಯಾನಂದ ಅಂಚನ್ ಭಾಗವಹಿಸಲಿರುವರು.

ಕ್ಯಾಂಪೋ ಸಂಸೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ದ.ಕ. ಜಿಲ್ಲಾ ಸಹಕಾರಿ ಉತ್ಪಾದಕರ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ದ.ಕ. ಮತ್ತು ಉಡುಪಿ ಜಿಲ್ಲಾ ಸದಾಶಿ ಮೀನುಗಾರರ ಮಹಾಮಂಡಳ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ಗೌರವ ಉಪಸ್ಥಿತರಿರುವರು. ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ, ಸಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್‌.. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್‌ ಭಾಗವಹಿಸಲಿರುವರು.

ಕುಂದಾಪುರ: ಶಾಲಾ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್‌ ಹಾಗೂ ಬಾಂಗ್‌..✴️ ಶಾಲಾಡಳಿತದ ವಿರುದ್ಧ ಹಿಂ.ಜಾಗರಣದಿಂದ ಪ್ರತಿಭಟನೆ – Vishwanews24

ಸಹಕಾರ ರತ್ನ ಪ್ರಶಸ್ತಿ ಪ್ರದಾನ
ಕರ್ನಾಟಕ ಸರಕಾರ ರಾಜ್ಯ ಮಟ್ಟದಲ್ಲಿ ನೀಡುವ ‘ಸಹಕಾರ ರತ್ನ ಪ್ರಶಸ್ತಿಯನ್ನು ಕೊಂಕೋಡಿ ಪದ್ಮನಾಭ, ನಿತ್ಯಾನಂದ ಮುಂಡೋಡಿ ದಂಬೆಕಾನ ಸದಾಶಿವ ರೈ, ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಯಶ್ಪಾಲ್ ಸುವರ್ಣ ಅವರಿಗೆ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಹಕಾರಿ ರಾಜೇಂದ್ರ ಕುಮಾರ್ ತಿಳಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ ಜಿಲ್ಲಾ ಯೂನಿಯನ್ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ,_ಬ್ಯಾಂಕಿನ ನಿರ್ದೇಶಕರಾದ ಬಿ. ನಿರಂಜನ್, ಟಿ.ಜಿ. ರಾಜಾರಾಮ್ ಭಟ್, ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್.ಬಿ. ಜಯರಾಮ ರೈ, ಶಶಿಕುಮಾರ್ ರೈ ಬಾಲ್ಯೂಟ್ಟು ಭಾಸ್ಕರ್ ಎಸ್. ಕೋಟ್ಯಾನ್, ರಾಜೇಶ್ ರಾವ್, ರಾಜು ಪೂಜಾರಿ, ಅಶೋಕ್ ಕುಮಾರ್ ಶೆಟ್ಟಿ ಸದಾಶಿವ ಉಳ್ಳಾಲ, ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್, ಸಹಾಯಕ ನಿಬಂಧಕ ಸುಧೀರ್ ಕುಮಾರ್‌ ಉಪಸ್ಥಿತರಿದ್ದರು,
ಸಹಕಾರ ಜಾಥಾ
ಎಸ್‌ಸಿಡಿಸಿಸಿ ಬ್ಯಾಂಕಿನ ಆವರಣದಿಂದ ಕರಾವಳಿ ಉತ್ಸವ ಮೈದಾನದವರೆಗೆ ಸಹಕಾರಿಗಳು ವಾಹನದ ಮೂಲಕ ಸಹಕಾರ ಜಾಥಾ’ ದಲ್ಲಿ ಭಾಗವಹಿಸಲಿದ್ದು ಸುಮಾರು 900 ಚತುಷ್ಕಕ್ರ ವಾಹನಗಳು ಪಾಲ್ಗೊಳ್ಳಲಿವೆ. ಸಹಕಾರ ಆಂದೋಲನದ ಮೂಲಪುರುಷ ಮೊಳಹಳ್ಳಿ ಶಿವರಾವ್‌ ಅವರನ್ನು ಸ್ಮರಿಸುವ ಹಾಗೂ ಸಹಕಾರ ಚಳವಳಿಯನ್ನು ಪ್ರತಿಬಿಂಬಿಸುವ ಆಕರ್ಷಕ ಟ್ಯಾಬ್ಲೊಗಳು, ಹೊನ್ನಾವರ ಬ್ಯಾಂಡ್ ಸೇರಿದಂತೆ ವಿವಿಧ ಕಲಾ ತಂಡಗಳ ಸಂಯೋಜನೆಯಲ್ಲಿ ಸಹಕಾರ ಜಾಥಾ’ ನಡೆಯಲಿದೆ ಎಂದು ಡಾ| ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago