ಉಡುಪಿ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ನಿಮಿತ್ತ ನಡೆಯುವ ಕಾರ್ಯಕ್ರಮದ ಪ್ರಯುಕ್ತ ನವೆಂಬರ್ 19 ರಿಂದ 21 ರ ವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್ವರೆಗೆ ಈ ಕೆಳಗಿನಂತೆ ತಾತ್ಕಾಲಿಕ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.
ನ. 19 ರಂದು ಬಂಡಿಯಲ್ಲಿ ಗರುಡ ವಾಹನ ಉತ್ಸವ, ಕೆರೆದೀಪ ಪ್ರಯುಕ್ತ ಅಂದು ರಾತ್ರಿ 8 ಗಂಟೆಯಿ0ದ 12 ರ ವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿAದ ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್ಗಳು ತಾಲೂಕು ಜಂಕ್ಷನ್ನಿ0ದ ಕಲ್ಲೊಟ್ಟೆ, ಮಾರ್ಕೇಟ್ ಮಾರ್ಗವಾಗಿ ಬಸ್ನಿಲ್ದಾಣ ಪ್ರವೇಶಿಸಬೇಕು ಹಾಗೂ ಸ್ಟೇಟ್ ಬ್ಯಾಂಕ್ ಜಂಕ್ಷನ್ನಿ0ದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ವರೆಗಿನ ಮಾರ್ಗದಲ್ಲಿ ದ್ವಿ–ಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು.
ನ. 20 ರಂದು ಲಕ್ಷದೀಪೋತ್ಸವ ವನಭೋಜನ ಉತ್ಸವ ಇರುವುದರಿಂದ ಅಂದು ಬೆಳಗ್ಗೆ 10 ರಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಹಾಗೂ ನ. 21 ರಂದು ಓಕುಳಿ ಹಾಗೂ ಪಲ್ಲಕ್ಕಿ ಉತ್ಸವ ಇರುವುದರಿಂದ ಅಂದು ಸಂಜೆ 4 ಗಂಟೆಯಿ0ದ ಮರುದಿನ ಬೆಳಗ್ಗೆ 4 ಗಂಟೆಯವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿ0ದ ಹಿರಿಯಂಗಡಿ, ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು. ಬಸ್ಗಳು ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್ಗಳು ತಾಲೂಕು ಜಂಕ್ಷನ್ನಿAದ ಕಲ್ಲೊಟ್ಟೆ ಮಾರ್ಕೇಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್ ಜಂಕ್ಷನ್ನಿ0ದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ವರೆಗಿನ ಮಾರ್ಗದಲ್ಲಿ ದ್ವಿಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು.
ಮೇಲ್ಕಂಡ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…