ಪಾಟ್ನಾ : ಬಿಹಾರದಲ್ಲಿ ಎನ್ಡಿಎ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ನ.20 ರಂದು ಬೆಳಗ್ಗೆ 11 ರಿಂದ 12 ಗಂಟೆಯೊಳಗೆ ಪ್ರಧಾನಿ ಮೋದಿ ಸಮ್ಮುಖದಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ.
ಅಧಿಕಾರದ ಗದ್ದುಗೆ ಹಿಡಿದ ಎನ್ಡಿಎ ಮೈತ್ರಿಕೂಟದಲ್ಲಿ ಈಗ ಸಚಿವ ಸ್ಥಾನಕ್ಕಾಗಿ ಹಗ್ಗ-ಜಗ್ಗಾಟ ಶುರುವಾಗಿದೆ. ಗೃಹ ಖಾತೆಗೆ ಬಿಜೆಪಿ ಪಟ್ಟು ಹಿಡಿದಿದ್ದು, ಖಾತೆ ಬಿಟ್ಟು ಕೊಡಲು ನಿತೀಶ್ಕುಮಾರ್ ಒಪ್ಪಿಲ್ಲ. ಆರೋಗ್ಯ, ಹಣಕಾಸು ಖಾತೆ ಬಿಟ್ಟು ಕೊಡೋದಾಗಿ ಬಿಜೆಪಿ ಮುಂದಿಟ್ಟಿರೋ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.
ಇಬ್ಬರು ಉಪಮುಖ್ಯಮಂತ್ರಿಗಳು ನೇಮಕವಾಗೋ ಸಾಧ್ಯತೆಗಳಿದ್ದು, ಮಹಿಳೆಯೊಬ್ಬರಿಗೆ ಅದೃಷ್ಟ ಒಲಿಯೋ ಸಾಧ್ಯತೆಗಳಿವೆ. ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮೂವರು ಕೇಂದ್ರ ವೀಕ್ಷಕರನ್ನ ನೇಮಕ ಮಾಡಲಾಗಿದೆ.
ಇನ್ನೂ ಸರ್ಕಾರ ಅಧಿಕಾರಕ್ಕೆ ಬರೋ ಮುನ್ನ ಜನ ಸುರಾಜ್ ಪಕ್ಷದ ನಾಯಕ ಪ್ರಶಾಂತ್ ಕಿಶೋರ್ ಸವಾಲೊಂದನ್ನು ಹಾಕಿದ್ದಾರೆ. ಬಿಹಾರದಲ್ಲಿ ನಿತೀಶ್ 1.5 ಕೋಟಿ ಜನರಿಗೆ ತಲಾ 2 ಲಕ್ಷ ನೀಡಿದ್ರೆ ರಾಜಕೀಯ ತೊರೆಯುವುದಾಗಿ ಸವಾಲೆಸೆದಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…