ಪುತ್ತೂರು : ರಾಜ್ಯದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಲ್ಲಿ ಚಂಪಾಷಷ್ಠಿ ಮಹೋತ್ಸವ ಪ್ರಯುಕ್ತ ನವೆಂಬರ್ 23ರಂದು ಲಕ್ಷ ದೀಪೋತ್ಸವ ನಡೆಯಲಿದೆ. ಈ ಬಾರಿ ಈ ವೇಳೆ ಕುಣಿತ ಭಜನೆಯನ್ನು ಏರ್ಪಡಿಸಲಾಗಿದೆ.
ನವೆಂಬರ್ 21 ರ ಕಾರ್ತಿಕ ದ್ವಾದಶಿಯಂದು ಚಂಪಾಷಷ್ಠಿ ಮಹೋತ್ಸವಕ್ಕೆ ಕೊಪ್ಪರಿಗೆ ಏರುವ ಮೂಲಕ ಚಾಲನೆ ಲಭಿಸಲಿದೆ. ಡಿ.5 ಮಾರ್ಗಶಿರ ಶುದ್ಧ ದ್ವಾದಶಿಯಂದು ಬೆಳಿಗ್ಗೆ ಕೊಪ್ಪರಿಗೆ ಇಳಿದು, ರಾತ್ರಿ ನೀರು ಬಂಡಿ ಉತ್ಸವ, ದೈವಗಳ ನಡಾವಳಿ ನಡೆಯುವುದರೊಂದಿಗೆ ಸಂಪನ್ನಗೊಳ್ಳಲಿದೆ’ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ ರಾಂ ಸುಳ್ಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಲಕ್ಷ ದೀಪೋತ್ಸವದ ದಿನ ಸಂಜೆ 7ರಿಂದ ದೇವಳದ ರಾಜಗೋಪುರದ ಬಳಿಯಿಂದ ರಥಬೀದಿ, ಅಡ್ಡಬೀದಿ, ಕಾಶಿಕಟ್ಟೆಯಾಗಿ ಕುಮಾರಧಾರಾದವರೆಗೆ ಕುಣಿತ ಭಜನೆ ಆಯೋಜಿಸಲಾಗಿದೆ. ಕುಣಿತ ಭಜನೆಯಲ್ಲಿ 1 ಸಾವಿರ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಭಾಗವಹಿಸುವ ತಂಡಗಳು ನ. 20 ಒಳಗಾಗಿ ದೇವಳದ ಕಚೇರಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು. ಮಾಹಿತಿಗೆ: 9482646275, ಸಂಪರ್ಕಿಸಬಹುದು ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ನೊಂದಾಯಿಸಿಕೊಳ್ಳಬಹುದು’ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…