ಪುತ್ತೂರು : ರಾಜ್ಯದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಲ್ಲಿ ಚಂಪಾಷಷ್ಠಿ ಮಹೋತ್ಸವ ಪ್ರಯುಕ್ತ ನವೆಂಬರ್ 23ರಂದು ಲಕ್ಷ ದೀಪೋತ್ಸವ ನಡೆಯಲಿದೆ. ಈ ಬಾರಿ ಈ ವೇಳೆ ಕುಣಿತ ಭಜನೆಯನ್ನು ಏರ್ಪಡಿಸಲಾಗಿದೆ.
ನವೆಂಬರ್ 21 ರ ಕಾರ್ತಿಕ ದ್ವಾದಶಿಯಂದು ಚಂಪಾಷಷ್ಠಿ ಮಹೋತ್ಸವಕ್ಕೆ ಕೊಪ್ಪರಿಗೆ ಏರುವ ಮೂಲಕ ಚಾಲನೆ ಲಭಿಸಲಿದೆ. ಡಿ.5 ಮಾರ್ಗಶಿರ ಶುದ್ಧ ದ್ವಾದಶಿಯಂದು ಬೆಳಿಗ್ಗೆ ಕೊಪ್ಪರಿಗೆ ಇಳಿದು, ರಾತ್ರಿ ನೀರು ಬಂಡಿ ಉತ್ಸವ, ದೈವಗಳ ನಡಾವಳಿ ನಡೆಯುವುದರೊಂದಿಗೆ ಸಂಪನ್ನಗೊಳ್ಳಲಿದೆ’ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ ರಾಂ ಸುಳ್ಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಲಕ್ಷ ದೀಪೋತ್ಸವದ ದಿನ ಸಂಜೆ 7ರಿಂದ ದೇವಳದ ರಾಜಗೋಪುರದ ಬಳಿಯಿಂದ ರಥಬೀದಿ, ಅಡ್ಡಬೀದಿ, ಕಾಶಿಕಟ್ಟೆಯಾಗಿ ಕುಮಾರಧಾರಾದವರೆಗೆ ಕುಣಿತ ಭಜನೆ ಆಯೋಜಿಸಲಾಗಿದೆ. ಕುಣಿತ ಭಜನೆಯಲ್ಲಿ 1 ಸಾವಿರ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಭಾಗವಹಿಸುವ ತಂಡಗಳು ನ. 20 ಒಳಗಾಗಿ ದೇವಳದ ಕಚೇರಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು. ಮಾಹಿತಿಗೆ: 9482646275, ಸಂಪರ್ಕಿಸಬಹುದು ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ನೊಂದಾಯಿಸಿಕೊಳ್ಳಬಹುದು’ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…