ಪುತ್ತೂರು : ರಾಜ್ಯದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಲ್ಲಿ ಚಂಪಾಷಷ್ಠಿ ಮಹೋತ್ಸವ ಪ್ರಯುಕ್ತ ನವೆಂಬರ್ 23ರಂದು ಲಕ್ಷ ದೀಪೋತ್ಸವ ನಡೆಯಲಿದೆ. ಈ ಬಾರಿ ಈ ವೇಳೆ ಕುಣಿತ ಭಜನೆಯನ್ನು ಏರ್ಪಡಿಸಲಾಗಿದೆ.
ನವೆಂಬರ್ 21 ರ ಕಾರ್ತಿಕ ದ್ವಾದಶಿಯಂದು ಚಂಪಾಷಷ್ಠಿ ಮಹೋತ್ಸವಕ್ಕೆ ಕೊಪ್ಪರಿಗೆ ಏರುವ ಮೂಲಕ ಚಾಲನೆ ಲಭಿಸಲಿದೆ. ಡಿ.5 ಮಾರ್ಗಶಿರ ಶುದ್ಧ ದ್ವಾದಶಿಯಂದು ಬೆಳಿಗ್ಗೆ ಕೊಪ್ಪರಿಗೆ ಇಳಿದು, ರಾತ್ರಿ ನೀರು ಬಂಡಿ ಉತ್ಸವ, ದೈವಗಳ ನಡಾವಳಿ ನಡೆಯುವುದರೊಂದಿಗೆ ಸಂಪನ್ನಗೊಳ್ಳಲಿದೆ’ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ ರಾಂ ಸುಳ್ಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಲಕ್ಷ ದೀಪೋತ್ಸವದ ದಿನ ಸಂಜೆ 7ರಿಂದ ದೇವಳದ ರಾಜಗೋಪುರದ ಬಳಿಯಿಂದ ರಥಬೀದಿ, ಅಡ್ಡಬೀದಿ, ಕಾಶಿಕಟ್ಟೆಯಾಗಿ ಕುಮಾರಧಾರಾದವರೆಗೆ ಕುಣಿತ ಭಜನೆ ಆಯೋಜಿಸಲಾಗಿದೆ. ಕುಣಿತ ಭಜನೆಯಲ್ಲಿ 1 ಸಾವಿರ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಭಾಗವಹಿಸುವ ತಂಡಗಳು ನ. 20 ಒಳಗಾಗಿ ದೇವಳದ ಕಚೇರಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು. ಮಾಹಿತಿಗೆ: 9482646275, ಸಂಪರ್ಕಿಸಬಹುದು ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ನೊಂದಾಯಿಸಿಕೊಳ್ಳಬಹುದು’ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…