Featured

ನ.28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕವರೆಗೆ ಭರ್ಜರಿ ರೋಡ್ ಶೋ – vishwanews24

ನ.28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕವರೆಗೆ ಭರ್ಜರಿ ರೋಡ್ ಶೋ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಲ್ಲಿ ನ.28ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗಿಯಾಗಲಿದ್ದು, ಅದಕ್ಕೆ ಮುನ್ನ ಬನ್ನಂಜೆಯ ನಾರಾಯಣಗುರು ವೃತ್ತದಿಂದ ಕಲ್ಸಂಕದವರೆಗೆ ಬೃಹತ್ ರೋಡ್ ಶೋ ನಡೆಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಪ್ರಧಾನಿ ಮೋದಿಯವರ ಆಗಮನಕ್ಕಾಗಿ ಉಡುಪಿ ನಗರ ಸರ್ವಸನ್ನದ್ಧವಾಗಿದೆ.

ಮೋದಿಯವರು ನ. 28ರ ಬೆಳಗ್ಗೆ 11.05ರ ವೇಳೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಉಡುಪಿಯ ಆದಿಉಡುಪಿ ಹೆಲಿಪ್ಯಾಡ್‌ಗೆ 11.35ಕ್ಕೆ ಬರಲಿದ್ದಾರೆ. ಅಲ್ಲಿಂದ ರಸ್ತೆಯ ಮೂಲಕ ಶ್ರೀ ಕೃಷ್ಣಮಠಕ್ಕೆ ಮಧ್ಯಾಹ್ನ 12 ಗಂಟೆಗೆ ಆಗಮಿಸಲಿದ್ದಾರೆ. ಶ್ರೀ ಕೃಷ್ಣಮಠದಲ್ಲಿ ದೇವರ ದರ್ಶನ ಪಡೆದು ಅನಂತರ ಗೀತಾಮಂದಿರಕ್ಕೆ ಭೇಟಿ ನೀಡಿ, ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಿ ಪಾರ್ಕಿಂಗ್ ಪ್ರದೇಶದ ಸಮೀಪದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಭರ್ಜರಿ ರೋಡ್ ಶೋ
ಬನ್ನಂಜೆಯಿಂದ ಕಲ್ಸಂಕದವರೆಗೆ ಪ್ರಧಾನಿ ಮೋದಿ ಅವರ ರೋಡ್ ಶೋ ಇರುವುದರಿಂದ ಈ ಮಾರ್ಗದಲ್ಲಿ ಎರಡೂ ಕಡೆ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಬೆಳಗ್ಗೆ 11.35ಕ್ಕೆ ಆದಿಉಡುಪಿ ಹೆಲಿಪ್ಯಾಡ್‌ಗೆ ಮೋದಿಯವರು ಆಗಮಿಸಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ಶ್ರೀ ಮಠಕ್ಕೆ ಬರಲಿದ್ದಾರೆ. ಈ ವೇಳೆ ಬನ್ನಂಜೆಯಿಂದ ಕಲ್ಸಂಕದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕಾಗಿ ಬನ್ನಂಜೆ ಶ್ರೀ ನಾರಾಯಣ ಗುರು ಮಂದಿರದ ಸಮೀಪ, ಜಯಲಕ್ಷ್ಮೀ ಸಿಲ್ಕ್ ಸಮೀಪ ಹಾಗೂ ಸಿಟಿ ಬಸ್ ನಿಲ್ದಾಣ ಸಮೀಪದಲ್ಲಿ ವೇದಿಕೆ ನಿರ್ಮಿಸಿ ಯಕ್ಷಗಾನ, ಹುಲಿವೇಷ ಹಾಗೂ ಕೃಷ್ಣವೇಷ ಪ್ರದರ್ಶನಕ್ಕೂ ವ್ಯವಸ್ಥೆ ಮಾಡಲಾಗಿದೆ. ಮೋದಿಯವರಿಗೆ ಈ ವೇಳೆ ಪುಷ್ಪಾರ್ಚನೆಗೂ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ದರ್ಶನ ಸಮಯ ವ್ಯತ್ಯಯ
ಪ್ರಧಾನಿ ಮೋದಿ ಅವರು ಉಡುಪಿ ಶ್ರೀ ಕೃಷ್ಣಮಠಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನ.28ರ ಬೆಳಗ್ಗೆ 8ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಶ್ರೀ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಈ ಅವಧಿಯಲ್ಲಿ ದೇವಸ್ಥಾನದ ಒಳಗೆ ಭಕ್ತರ ಪ್ರವೇಶಕ್ಕೆ ಕೂಡ ಅವಕಾಶ ಇಲ್ಲ.

3 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ
ಎಸ್‌ಪಿಜಿ, ಕೇಂದ್ರ ಹಾಗೂ ರಾಜ್ಯ ಗುಪ್ತಚರ ವಿಭಾಗ ಹೊರತುಪಡಿಸಿ ಸುಮಾರು 3 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. 9 ಮಂದಿ ಎಸ್‌ಪಿ, ಒಬ್ಬರು ಹೆಚ್ಚುವರಿ ಎಸ್ಎಪಿ, 27 ಮಂದಿ ಡಿವೈಎಸ್ಪಿ, 49 ಇನ್ ಸ್ಪೆಕ್ಟರ್ ಗಳು, 127 ಪಿಎಸ್ಐ, 232 ಎಎಸ್‌ಐ, 1608 ಹೆಡ್ ಕಾನ್ ಸ್ಟೆಬಲ್ ಹಾಗೂ ಕಾನ್‌ಸ್ಟೆಬಲ್‌ಗಳು, 309 ಮಹಿಳಾ ಪೊಲೀಸ್ ಕಾನ್ ಸ್ಟೆಬಲ್ ಗಳು, 7 ಸಶಸ್ತ್ರ ಮೀಸಲು ತಂಡ, 3 ಸಶಸ್ತ್ರ ಮೀಸಲು ಗಾರ್ಡ್, 6 ತ್ವರಿತ ಪ್ರತಿಕ್ರಿಯೆ ತಂಡ, 6 ಕೆಎಸ್‌ಆರ್‌ಪಿ, 48 ಬಾಂಬ್ ನಿಷ್ಕ್ರಿಯ ತಂಡ, 4 ಅಗ್ನಿಶಾಮಕ ವಾಹನ, 4 ಆ್ಯಂಬುಲೆನ್ಸ್, 33 ವಾಹನಗಳು ಇರಲಿವೆ.

 

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

22 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

22 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

23 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

1 day ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

1 day ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

1 day ago