ಉಡುಪಿ ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಯೋಜಿಸಿರುವ ಬೃಹತ್ ಗೀತೋತ್ಸವ ಪ್ರಯುಕ್ತ ನವೆಂಬರ್ 28 ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂದು ಸ್ಥಳೀಯ ರಜೆ ಘೋಷಣೆ ಮಾಡುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ದೇಶದ ಪ್ರಧಾನಿಯೋರ್ವರು ಸರಿಸುಮಾರು ಮೂರು ದಶಕಗಳ ಬಳಿಕ (ಚುನಾವಣಾ ಪ್ರಚಾರವನ್ನು ಹೊರತುಪಡಿಸಿ) ಉಡುಪಿಗೆ ಭೇಟಿ ನೀಡುತ್ತಿರುವುದು ಜಿಲ್ಲೆಗೆ ಸಂಭ್ರಮದ ವಿಚಾರವಾಗಿದೆ.
ಜಿಲ್ಲಾಡಳಿತ ಸ್ಥಳೀಯ ರಜೆ ನೀಡಿದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನತೆ ಭಾಗಿಯಾಗಲು ಅನುಕೂಲವಾಗಲಿದೆ.
ಪ್ರಧಾನಮಂತ್ರಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರಕ್ಕೆ ಸಂಬಂಧಿಸಿದಂತೆ ವಾಹನಗಳ ಸಂಚಾರ ಮತ್ತು ಸಾರ್ವಜನಿಕ ಓಡಾಟದ ನಿರ್ಬಂಧವಿರುವ ಹಿನ್ನೆಲೆಯಲ್ಲಿ 28.11.2025 ರ ಶುಕ್ರವಾರದಂದು ತುರ್ತು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಅಂಗನವಾಡಿ, ಶಾಲಾ-ಕಾಲೇಜು ಹಾಗೂ ಸರಕಾರಿ ಕಛೇರಿಗಳೂ ಸೇರಿದಂತೆ ಜಿಲ್ಲಾದ್ಯಂತ ಒಂದು ದಿನದ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸಬೇಕೆಂದು ಯಶ್ ಪಾಲ್ ಸುವರ್ಣ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…