Featured

ನ. 3 ರವರೆಗೆ ಸುರತ್ಕಲ್ ಟೋಲ್ ಪ್ಲಾಜಾ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ – Vishwanews24

ನ. 3 ರವರೆಗೆ ಸುರತ್ಕಲ್ ಟೋಲ್ ಪ್ಲಾಜಾ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಪ್ಲಾಜಾ ಸುತ್ತಮುತ್ತಲು 200 ಮೀಟರ್ ವ್ಯಾಪ್ತಿಯಲ್ಲಿ ಅಕ್ಟೋಬರ್ 28 ರ ಬೆಳಿಗ್ಗೆ 6 ರಿಂದ ನವೆಂಬರ್ 3 ರ ಸಂಜೆ 6 ರವರೆಗೆ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಘೋಷಿಸಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ನಿರ್ಬಂಧಕಾಜ್ಞೆ ಜಾರಿಯಲ್ಲಿರುವ ಸಮಯದಲ್ಲಿ ಈ ಕೆಳಕಂಡ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.

1 ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಯಾ ಪದ ಹಾಡುವುದು, ಬೇರೆ ಮಾಡುವುದು ಸಂಜೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಪ್ರಸಾರ ಮಾಡುವುದು, ಪುಕಟಣಾ ಪತ್ರಿಕೆಗಳ ಯಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.

2 ಐದು ಮತ್ತು ಅದಕ್ಕಿಂತ ಹೆಚ್ಚು ಜನರು ಒಟ್ಟಾಗಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

3 ಶಸ್ತ್ರಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಬಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು, ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

ಮಣಿಪಾಲ: ಕಾರಿನ ಮೇಲೆ ಪಟಾಕಿ ಇಟ್ಟು ಸಿಡಿಸಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲು – Vishwanews24

4 ಪಟಾಕಿಗಳನ್ನು ಸಿಡಿಸುವುದು, ಯಾವುದೇ ಮಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

5 ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ.

6 ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.

7 ಸರ್ಕಾರಿ ಸಂಸ್ಥೆಗಳು, ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ/ಸಿಬ್ಬಂಧಿಗಳ ವಿರುದ್ಧ ನಿಂಧಿಸುವಂತಹ ಅವಹೇಳನಕಾರಿಯಾದಂತಹ ಯಾವುದೇ ಘೋಷಣೆಗಳು/ಭಾಷಣಗಳು ಪ್ರಕಟಣೆಗಳು ಅವಾಚ್ಯ ಶಬ್ದಗಳ ಬಳಿಕ ಪ್ರಚೋದನಾಕಾರಿ ಭಾಷಣ/ಗಾಯನ ಇತ್ಯಾಧಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

8 ಯಾವುದೇ ಖಾಸಗಿ ಜಾತಿ/ಧರ್ಮ/ ಕೋಮು/ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಕತೆಗೆ ಭಾದಕ ಉಂಟು ಮಾಡುವುದನ್ನು ನಿಷೇಧಿಸಲಾಗಿದೆ.

8 ಯಾವುದೇ ಖಾಸಗಿ ಜಾತಿ/ಧರ್ಮ/ ಕೋಮು/ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಕತೆಗೆ ಭಾದಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ನೇರ ನುಡಿಗಳಿಂದ ಶತ್ರುಗಳ ಹೆಚ್ಚಳ..ನೋಡಿ ಇಂದಿನ ದಿನ ಭವಿಷ್ಯ – Vishwanews24

9. ಯಾವುದೇ ತರಹದ ಮೆರವಣಿಗೆ, ಪ್ರತಿಭಟನೆ, ರಸ್ತೆ ತಡೆ ಜಾಥ ಮುಂತಾದ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಈ ನಿರ್ಬಂಧಕಾಜ್ಞೆಯು ಜಾರಿಯಲ್ಲಿರುವ ಪುದೇಶದಲ್ಲಿ ಸರ್ಕಾರದಿಂದ ಯಾ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

4 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

4 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago