ಗ್ರಹಣವು ಮಧ್ಯಾಹ್ನ 2.39ಕ್ಕೆ ಸ್ಪರ್ಶಿಸಿ ಅಪರಾಹ್ನ 4.29ಕ್ಕೆ ಉಚ್ಛ್ರಾಯ ಮಧ್ಯ ಸ್ಥಿತಿ ಗೆ ತಲುಪಿ ಸಂಜೆ 6.19ಕ್ಕೆ ಮೋಕ್ಷವಾಗಲಿದೆ. ಚಂದ್ರೋದಯ ಆಗುವುದು ಸಂಜೆ 5.59ಕ್ಕೆ. ಆ ನಂತರ ಕಾಣಿಸುತ್ತದೆ. ಆದರೆ ಮೋಕ್ಷ ಕಾಲ ಸಂಜೆ 6.19ಕ್ಕೆ ಇರುವುದರಿಂದ 20 ನಿಮಿಷದಲ್ಲಿ ಚಂದ್ರ ಗ್ರಹಣದ ದರ್ಶನ ಸಹಿತ ಇಡೀ ಗ್ರಹಣ ಮುಗಿದು ಹೋಗುತ್ತದೆ. ಇದು ಕಾರ್ತಿಕ ಹುಣ್ಣಿಮೆ ಗ್ರಹಣವಾಗಿದೆ.
ಈ ದಿನ ಹಗಲು ಭೋಜನ ನಿಷಿದ್ಧ. ಬಾಲವೃದ್ಧರೋಗಿಗಳಿಗೆ 11.30 ರ ವರೆಗೆ ಮಾಡಬಹುದು.
ಹಲವು ದೇವಾಲಯಗಳಲ್ಲಿ ಪ್ರವೇಶ ನಿರ್ಬಂಧ: ನಾಳೆ ರಾಹುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆ ರಾಜ್ಯದ ವಿವಿಧೆಡೆ ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಮೈಸೂರಿನ ಚಾಮುಂಡಿದೇವಿ ದೇಗುಲ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಾಳೆ ಮಧ್ಯಾಹ್ನ 1 ಗಂಟೆ ಬಳಿಕ ಚಾಮುಂಡಿಬೆಟ್ಟಕ್ಕೆ ಭಕ್ತರ ನಿಷೇಧವಿರಲಿದೆ.
ಧರ್ಮಸ್ಥಳ ಮಂಜುನಾಥ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಕಟೀಲು ದೇವಸ್ಥಾನಗಳ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ. ಧರ್ಮಸ್ಥಳ ದೇವಸ್ಥಾನ ನಾಳೆ ಮಧ್ಯಾಹ್ನ 1.30ರಿಂದ ಸಂಜೆ 7ರವರೆಗೆ ಬಂದ್ ಆಗಿರಲಿದೆ. ನಾಳೆ ಸೇವೆ, ಅನ್ನಪ್ರಸಾದ ಇರುವುದಿಲ್ಲ. ನಾಳೆ ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30ರವರೆಗೆ ದರ್ಶನಕ್ಕೆ ನಿರ್ಬಂಧವಿರಲಿದೆ. ನಂತರ ಸಂಜೆ 7.30ರಿಂದ ರಾತ್ರಿ 9ರವರೆಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಾಳೆ ಬೆಳಗ್ಗೆ 9.30ರ ಬಳಿಕ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪ್ರವೇಶ ನಿಷೇಧ ಹೇರಿದ್ದು ರಾತ್ರಿ 8 ಗಂಟೆಗೆ ಕಟೀಲು ದೇಗುಲದಲ್ಲಿ ಪೂಜೆ, ಅನ್ನಪ್ರಸಾದ ಇರಲಿದೆ.
ಈ ದಿನ ಕಟೀಲು ದೇವಳದಲ್ಲಿ ದುರ್ಗೆಗೆ ಬೆಳಿಗ್ಗೆ 9.30 ಗೆ ಪೂಜೆ. ಹಗಲು ಭೋಜನ ಇಲ್ಲ.11.30. ರ ತನಕ ಫಲಾಹಾರ ಇದೆ. ರಾತ್ರಿ 8 ಗಂಟೆಗೆ ರಾತ್ರಿ ಪೂಜೆಗಳು ನಡೆಯುತ್ತದೆ.8 ಕ್ಕೆ ಭೋಜನವೂ ಇದೆ.
ಗ್ರಹಣಕಾಲದಲ್ಲಿ ದೇವಳ ತೆರೆದಿರುತ್ತದೆ. ಮಧ್ಯಕಾಲದ ವರೆಗೆ ದೇವರಿಗೆ ಅಭಿಷೇಕ ಇದೆ. ಮಧ್ಯಕಾಲ 4.29 ಕ್ಕೆ ಗ್ರಹಣದ ವಿಶೇಷ ಪೂಜೆ ಇದೆ.
ದೇವರಿಗೆ ತುಪ್ಪ, ಶುದ್ಧ ಎಳ್ಳೆಣ್ಣೆ ಸಮರ್ಪಿಸಿ ದೋಷನಿವಾರಿಸಿಕೊಳ್ಳಬಹುದು. ಅಕ್ಕಿ ಹಾಗೂ ಉದ್ದು/ ಉದ್ದಿನಬೇಳೆ ದಾನ ನೀಡಬಹುದು.
ಈ ಸಂದರ್ಭದಲ್ಲಿ ಜಪ ಮಾಡಿದಲ್ಲಿ ನೂರುಪಟ್ಟು ಅನುಗ್ರಹ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…