ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ KSRTC ಬಸ್ ಡಿಕ್ಕಿ : 20ಕ್ಕೂ ಹೆಚ್ಚು ಮಂದಿಗೆ ಗಾಯ ; ಬಸ್ ಚಾಲಕನ ಸ್ಥಿತಿ ಗಂಭೀರ – vishwanews24

Featured, ರಾಜ್ಯ ನ್ಯೂಸ್

ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ KSRTC ಬಸ್ ಡಿಕ್ಕಿ : 20ಕ್ಕೂ ಹೆಚ್ಚು ಮಂದಿಗೆ ಗಾಯ ; ಬಸ್ ಚಾಲಕನ ಸ್ಥಿತಿ ಗಂಭೀರ

ರಾಮನಗರ: ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಕೆಎಸ್‍ಆರ್‌ಟಿಸಿ ಬಸ್  ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಬಸ್‍ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು ರಕ್ಷಿಸಿದ್ದಾರೆ.

ಉಡುಪಿ : ಕಾಂಗ್ರೆಸ್‌ ಮಹಿಳೆಯರಿಗೆ ಸ್ವಾಭಿಮಾನದ ಬದುಕಿಗಾಗಿ ಗ್ಯಾರಂಟಿ ನೀಡಿದೆ: ಸೌಮ್ಯ ರೆಡ್ಡಿ – vishwanews24

ಕ್ಯಾಂಟರ್ ಪಂಕ್ಚರ್ ಆಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿತ್ತು. ಇದನ್ನು ಗಮನಿಸದೇ ಚಾಲಕ ಬಸ್ ಚಲಾಯಿಸಿಕೊಂಡು ಬಂದಿದ್ದಾನೆ. ಪರಿಣಾಮ ಬಸ್ ಕ್ಯಾಂಟರ್‍ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸೋಲೂರು ಪೊಲೀಸರ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

ನಾರಾವಿ: ಮರಕ್ಕೆ ಢಿಕ್ಕಿ ಹೊಡೆದ ಬೈಕ್‌ ; ಇಬ್ಬರು ಸ್ಥಳದಲ್ಲಿಯೇ ಮೃತ್ಯು – vishwanews24

Leave a Reply