ಚಿತ್ರದುರ್ಗ: ಪಂಚಮಸಾಲಿಗಳಿಗೆ ಮೀಸಲಾತಿ ಕೊಟ್ಟರೆ ಮಠದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವಚಿತ್ರ ಹಾಕಿ ಖಾಯಂ ಗೌರವ ಕೊಡುತ್ತೇವೆ ಎಂದು ಕೂಡಲಸಂಗಮ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ನಗರದ ಗಾಯತ್ರಿ ಕಲ್ಯಾಣಮಂಟಪದಲ್ಲಿ ನಡೆದ ಪ್ರತಿಜ್ಞಾ ಪಂಚಾಯತ್ ಅಭಿಯಾನದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಅನ್ಯ ಸಮುದಾಯದವರು ಯಾರೂ ವಿರೋಧ ಮಾಡುತ್ತಿಲ್ಲ. ಆದರೆ ನಮ್ಮಲ್ಲಿ ಇರುವವರೇ ಹೊಟ್ಟೆಕಿಚ್ಚಿನಿಂದ, ಅಸೂಯೆಯಿಂದ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜಕೀಯ ವಿಚಾರವಾಗಿ ನೀವು ಯಾವ ನಾಯಕರನ್ನಾದರೂ ಆಯ್ಕೆ ಮಾಡಿಕೊಳ್ಳಿ. ಆದರೆ ಸಮಾಜ ಹಾಗೂ ಮೀಸಲಾತಿ ವಿಚಾರದಲ್ಲಿ ನಮ್ಮೊಂದಿಗೆ ಪ್ರಾಮಾಣಿಕ ಇರುವವರೇ ನಮ್ಮ ನಾಯಕರು ಎಂದರು.
ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಕ್ಕರೆ ಸಿಎಂ ಬೊಮ್ಮಾಯಿ ಹೆಸರು ಬರುತ್ತೇ ಹೊರೆತು, ಸ್ವಾಮೀಜಿಗೆ ಹಾಗೂ ಯತ್ನಾಳ್ ಗೆ ಅಲ್ಲ. ಮೀಸಲಾತಿ ನೀಡಿದರೆ ಮಠದಲ್ಲಿ ನಿಮ್ಮ ಪೊಟೋ ಹಾಕುತ್ತೇವೆ ಎಂದು ಬಿ.ಎಸ್.ಯಡಿಯೂರಪ್ಪನವರಿಗೆ ಹೇಳಿದ್ದೆವು. ಈ ಅವಕಾಶವನ್ನು ಯಡಿಯೂರಪ್ಪ ಕಳೆದುಕೊಂಡರು. ಹೀಗಾಗಿ ಈಗ ರಾಜ್ಯದ ಸಿಎಂ ಬೊಮ್ಮಾಯಿ ಅವರಿಗೆ ಆ ಅವಕಾಶ ಸಿಕ್ಕಿದೆ. ಅವರು ನಮ್ಮ ಸಮುದಾಯಕ್ಕೆ ಮೀಸಲಾತಿ ಕೊಟ್ಟರೆ ಖಾಯಂ ಆಗಿ ನಮ್ಮ ಮಠದಲ್ಲಿ ಬೊಮ್ಮಾಯಿ ಫೋಟೋ ಹಾಕಿ ಗೌರವ ಕೊಡುತ್ತೇವೆ ಎಂದರು.
ಪಂಚಮಸಾಲಿ ಸಮಾಜಕ್ಕಾಗಿ ಶಾಸಕ ಸ್ಥಾನ ಹೋದರೂ ಪರವಾಗಿಲ್ಲ ಎಂದು ಅರವಿಂದ್ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿ.ಸಿ.ಪಾಟೀಲ್ ಹೋರಾಟ ಮಾಡಿದ್ದಾರೆ. ಆದರೆ ಕೆಲವರು ಒಳಗೊಳಗೇ ದ್ರೋಹ ಬಗೆಯುತಿದ್ದಾರೆ ಎಂದು ಅಸಮಧಾನಗೊಂಡ ಸ್ವಾಮೀಜಿ, ಮೀಸಲಾತಿ ವಿರೋಧಿಗಳಿಗೆ ಬಹಿರಂಗವಾಗಿ ಸವಾಲು ಹಾಕಿದರು.
ಜಯ ಮೃತ್ಯುಂಜಯ ಸ್ವಾಮೀಜಿ ಮೀಸಲಾತಿ ಹೋರಾಟ ಮಾಡಿ ರಾಷ್ಟ್ರಾದ್ಯಂತ ಹೆಸರಾದರೆಂಬ ಅಸೂಯೆಯಿಂದ, ಹೊಟ್ಟೆಕಿಚ್ಚಿನಿಂದ ಕೆಲವರು ಮಾತನಾಡುತ್ತಿದ್ದಾರೆ. ನಾನು ಇವತ್ತೇ ಕೂಡಲಸಂಗಮ ಪೀಠ ಬಿಟ್ಟು ಹೋಗುತ್ತೇನೆ. ನೀವು ಯಾರಾದರೂ ಸ್ವಾಮೀಜಿಗಳ ಜೊತೆ ನೇತೃತ್ವ ವಹಿಸಿಕೊಳ್ಳಿ. ನಾನು ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ, ನಿಮ್ಮ ಹೋರಾಟಕ್ಕೆ ಬೆಂಬಲ ಕೊಡುತ್ತೇನೆ. ನಾವು ಕಷ್ಟ ಪಟ್ಟು ಹೋರಾಟ ಮಾಡುತ್ತಿದ್ದರೆ, ಕೆಲವರು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ನಾನು ಶ್ರೀ ಮಠ ಕಟ್ಟಲು ಅಥವಾ ನನ್ನ ವೈಯಕ್ತಿಕ ಬೆಳವಣಿಗೆಗಾಗಿ ಹೋರಾಟ ಮಾಡುತ್ತಿಲ್ಲ. ಇಂತಹ ದೊಡ್ಡ ಚಳವಳಿಯನ್ನು ಹತ್ತಿಕ್ಕುವ ಕೆಲಸವನ್ನು ಯಾರೂ ಮಾಡಬಾರದು ಎಂದು ಕಿಡಿ ಕಾರಿದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…