Featured

ಪಂಚಮಸಾಲಿಗಳಿಗೆ ಮೀಸಲಾತಿ ಕೊಟ್ಟರೆ ಮಠದಲ್ಲಿ ಮುಖ್ಯಮಂತ್ರಿ ಭಾವಚಿತ್ರ ಹಾಕಿ ಖಾಯಂ ಗೌರವ ಕೊಡುತ್ತೇವೆ : ಬಸವ ಜಯ ಮೃತ್ಯುಂಜಯ ಶ್ರೀ -Vishwanews24

ಪಂಚಮಸಾಲಿಗಳಿಗೆ ಮೀಸಲಾತಿ ಕೊಟ್ಟರೆ ಮಠದಲ್ಲಿ ಮುಖ್ಯಮಂತ್ರಿ ಭಾವಚಿತ್ರ ಹಾಕಿ ಖಾಯಂ ಗೌರವ ಕೊಡುತ್ತೇವೆ : ಬಸವ ಜಯ ಮೃತ್ಯುಂಜಯ ಶ್ರೀ -Vishwanews24

ಚಿತ್ರದುರ್ಗ: ಪಂಚಮಸಾಲಿಗಳಿಗೆ ಮೀಸಲಾತಿ ಕೊಟ್ಟರೆ ಮಠದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವಚಿತ್ರ ಹಾಕಿ ಖಾಯಂ ಗೌರವ ಕೊಡುತ್ತೇವೆ ಎಂದು ಕೂಡಲಸಂಗಮ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಗರದ ಗಾಯತ್ರಿ ಕಲ್ಯಾಣಮಂಟಪದಲ್ಲಿ ನಡೆದ ಪ್ರತಿಜ್ಞಾ ಪಂಚಾಯತ್ ಅಭಿಯಾನದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಅನ್ಯ ಸಮುದಾಯದವರು ಯಾರೂ ವಿರೋಧ ಮಾಡುತ್ತಿಲ್ಲ. ಆದರೆ ನಮ್ಮಲ್ಲಿ ಇರುವವರೇ ಹೊಟ್ಟೆಕಿಚ್ಚಿನಿಂದ, ಅಸೂಯೆಯಿಂದ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜಕೀಯ ವಿಚಾರವಾಗಿ ನೀವು ಯಾವ ನಾಯಕರನ್ನಾದರೂ ಆಯ್ಕೆ ಮಾಡಿಕೊಳ್ಳಿ. ಆದರೆ ಸಮಾಜ ಹಾಗೂ ಮೀಸಲಾತಿ ವಿಚಾರದಲ್ಲಿ ನಮ್ಮೊಂದಿಗೆ ಪ್ರಾಮಾಣಿಕ ಇರುವವರೇ ನಮ್ಮ ನಾಯಕರು ಎಂದರು.

ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಕ್ಕರೆ ಸಿಎಂ ಬೊಮ್ಮಾಯಿ ಹೆಸರು ಬರುತ್ತೇ ಹೊರೆತು, ಸ್ವಾಮೀಜಿಗೆ ಹಾಗೂ ಯತ್ನಾಳ್ ಗೆ ಅಲ್ಲ. ಮೀಸಲಾತಿ ನೀಡಿದರೆ ಮಠದಲ್ಲಿ ನಿಮ್ಮ ಪೊಟೋ ಹಾಕುತ್ತೇವೆ ಎಂದು ಬಿ.ಎಸ್.ಯಡಿಯೂರಪ್ಪನವರಿಗೆ ಹೇಳಿದ್ದೆವು. ಈ ಅವಕಾಶವನ್ನು ಯಡಿಯೂರಪ್ಪ ಕಳೆದುಕೊಂಡರು. ಹೀಗಾಗಿ ಈಗ ರಾಜ್ಯದ ಸಿಎಂ ಬೊಮ್ಮಾಯಿ ಅವರಿಗೆ ಆ ಅವಕಾಶ ಸಿಕ್ಕಿದೆ. ಅವರು ನಮ್ಮ ಸಮುದಾಯಕ್ಕೆ ಮೀಸಲಾತಿ ಕೊಟ್ಟರೆ ಖಾಯಂ ಆಗಿ ನಮ್ಮ ಮಠದಲ್ಲಿ ಬೊಮ್ಮಾಯಿ ಫೋಟೋ ಹಾಕಿ ಗೌರವ ಕೊಡುತ್ತೇವೆ ಎಂದರು.

ಪಂಚಮಸಾಲಿ ಸಮಾಜಕ್ಕಾಗಿ ಶಾಸಕ ಸ್ಥಾನ ಹೋದರೂ ಪರವಾಗಿಲ್ಲ ಎಂದು ಅರವಿಂದ್ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿ.ಸಿ.ಪಾಟೀಲ್ ಹೋರಾಟ ಮಾಡಿದ್ದಾರೆ. ಆದರೆ ಕೆಲವರು ಒಳಗೊಳಗೇ ದ್ರೋಹ ಬಗೆಯುತಿದ್ದಾರೆ ಎಂದು ಅಸಮಧಾನಗೊಂಡ ಸ್ವಾಮೀಜಿ, ಮೀಸಲಾತಿ ವಿರೋಧಿಗಳಿಗೆ ಬಹಿರಂಗವಾಗಿ ಸವಾಲು ಹಾಕಿದರು.

ಜಯ ಮೃತ್ಯುಂಜಯ ಸ್ವಾಮೀಜಿ ಮೀಸಲಾತಿ ಹೋರಾಟ ಮಾಡಿ ರಾಷ್ಟ್ರಾದ್ಯಂತ ಹೆಸರಾದರೆಂಬ ಅಸೂಯೆಯಿಂದ, ಹೊಟ್ಟೆಕಿಚ್ಚಿನಿಂದ ಕೆಲವರು ಮಾತನಾಡುತ್ತಿದ್ದಾರೆ. ನಾನು ಇವತ್ತೇ ಕೂಡಲಸಂಗಮ ಪೀಠ ಬಿಟ್ಟು ಹೋಗುತ್ತೇನೆ. ನೀವು ಯಾರಾದರೂ ಸ್ವಾಮೀಜಿಗಳ ಜೊತೆ ನೇತೃತ್ವ ವಹಿಸಿಕೊಳ್ಳಿ. ನಾನು ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ, ನಿಮ್ಮ ಹೋರಾಟಕ್ಕೆ ಬೆಂಬಲ ಕೊಡುತ್ತೇನೆ. ನಾವು ಕಷ್ಟ ಪಟ್ಟು ಹೋರಾಟ ಮಾಡುತ್ತಿದ್ದರೆ, ಕೆಲವರು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ನಾನು ಶ್ರೀ ಮಠ ಕಟ್ಟಲು ಅಥವಾ ನನ್ನ ವೈಯಕ್ತಿಕ ಬೆಳವಣಿಗೆಗಾಗಿ ಹೋರಾಟ ಮಾಡುತ್ತಿಲ್ಲ. ಇಂತಹ ದೊಡ್ಡ ಚಳವಳಿಯನ್ನು ಹತ್ತಿಕ್ಕುವ ಕೆಲಸವನ್ನು ಯಾರೂ ಮಾಡಬಾರದು ಎಂದು ಕಿಡಿ ಕಾರಿದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago