Featured

ಪಂಚಮಸಾಲಿಗಳಿಗೆ ಮೀಸಲಾತಿ ಕೊಟ್ಟರೆ ಮಠದಲ್ಲಿ ಮುಖ್ಯಮಂತ್ರಿ ಭಾವಚಿತ್ರ ಹಾಕಿ ಖಾಯಂ ಗೌರವ ಕೊಡುತ್ತೇವೆ : ಬಸವ ಜಯ ಮೃತ್ಯುಂಜಯ ಶ್ರೀ -Vishwanews24

ಪಂಚಮಸಾಲಿಗಳಿಗೆ ಮೀಸಲಾತಿ ಕೊಟ್ಟರೆ ಮಠದಲ್ಲಿ ಮುಖ್ಯಮಂತ್ರಿ ಭಾವಚಿತ್ರ ಹಾಕಿ ಖಾಯಂ ಗೌರವ ಕೊಡುತ್ತೇವೆ : ಬಸವ ಜಯ ಮೃತ್ಯುಂಜಯ ಶ್ರೀ -Vishwanews24

ಚಿತ್ರದುರ್ಗ: ಪಂಚಮಸಾಲಿಗಳಿಗೆ ಮೀಸಲಾತಿ ಕೊಟ್ಟರೆ ಮಠದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವಚಿತ್ರ ಹಾಕಿ ಖಾಯಂ ಗೌರವ ಕೊಡುತ್ತೇವೆ ಎಂದು ಕೂಡಲಸಂಗಮ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಗರದ ಗಾಯತ್ರಿ ಕಲ್ಯಾಣಮಂಟಪದಲ್ಲಿ ನಡೆದ ಪ್ರತಿಜ್ಞಾ ಪಂಚಾಯತ್ ಅಭಿಯಾನದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಅನ್ಯ ಸಮುದಾಯದವರು ಯಾರೂ ವಿರೋಧ ಮಾಡುತ್ತಿಲ್ಲ. ಆದರೆ ನಮ್ಮಲ್ಲಿ ಇರುವವರೇ ಹೊಟ್ಟೆಕಿಚ್ಚಿನಿಂದ, ಅಸೂಯೆಯಿಂದ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜಕೀಯ ವಿಚಾರವಾಗಿ ನೀವು ಯಾವ ನಾಯಕರನ್ನಾದರೂ ಆಯ್ಕೆ ಮಾಡಿಕೊಳ್ಳಿ. ಆದರೆ ಸಮಾಜ ಹಾಗೂ ಮೀಸಲಾತಿ ವಿಚಾರದಲ್ಲಿ ನಮ್ಮೊಂದಿಗೆ ಪ್ರಾಮಾಣಿಕ ಇರುವವರೇ ನಮ್ಮ ನಾಯಕರು ಎಂದರು.

ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಕ್ಕರೆ ಸಿಎಂ ಬೊಮ್ಮಾಯಿ ಹೆಸರು ಬರುತ್ತೇ ಹೊರೆತು, ಸ್ವಾಮೀಜಿಗೆ ಹಾಗೂ ಯತ್ನಾಳ್ ಗೆ ಅಲ್ಲ. ಮೀಸಲಾತಿ ನೀಡಿದರೆ ಮಠದಲ್ಲಿ ನಿಮ್ಮ ಪೊಟೋ ಹಾಕುತ್ತೇವೆ ಎಂದು ಬಿ.ಎಸ್.ಯಡಿಯೂರಪ್ಪನವರಿಗೆ ಹೇಳಿದ್ದೆವು. ಈ ಅವಕಾಶವನ್ನು ಯಡಿಯೂರಪ್ಪ ಕಳೆದುಕೊಂಡರು. ಹೀಗಾಗಿ ಈಗ ರಾಜ್ಯದ ಸಿಎಂ ಬೊಮ್ಮಾಯಿ ಅವರಿಗೆ ಆ ಅವಕಾಶ ಸಿಕ್ಕಿದೆ. ಅವರು ನಮ್ಮ ಸಮುದಾಯಕ್ಕೆ ಮೀಸಲಾತಿ ಕೊಟ್ಟರೆ ಖಾಯಂ ಆಗಿ ನಮ್ಮ ಮಠದಲ್ಲಿ ಬೊಮ್ಮಾಯಿ ಫೋಟೋ ಹಾಕಿ ಗೌರವ ಕೊಡುತ್ತೇವೆ ಎಂದರು.

ಪಂಚಮಸಾಲಿ ಸಮಾಜಕ್ಕಾಗಿ ಶಾಸಕ ಸ್ಥಾನ ಹೋದರೂ ಪರವಾಗಿಲ್ಲ ಎಂದು ಅರವಿಂದ್ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿ.ಸಿ.ಪಾಟೀಲ್ ಹೋರಾಟ ಮಾಡಿದ್ದಾರೆ. ಆದರೆ ಕೆಲವರು ಒಳಗೊಳಗೇ ದ್ರೋಹ ಬಗೆಯುತಿದ್ದಾರೆ ಎಂದು ಅಸಮಧಾನಗೊಂಡ ಸ್ವಾಮೀಜಿ, ಮೀಸಲಾತಿ ವಿರೋಧಿಗಳಿಗೆ ಬಹಿರಂಗವಾಗಿ ಸವಾಲು ಹಾಕಿದರು.

ಜಯ ಮೃತ್ಯುಂಜಯ ಸ್ವಾಮೀಜಿ ಮೀಸಲಾತಿ ಹೋರಾಟ ಮಾಡಿ ರಾಷ್ಟ್ರಾದ್ಯಂತ ಹೆಸರಾದರೆಂಬ ಅಸೂಯೆಯಿಂದ, ಹೊಟ್ಟೆಕಿಚ್ಚಿನಿಂದ ಕೆಲವರು ಮಾತನಾಡುತ್ತಿದ್ದಾರೆ. ನಾನು ಇವತ್ತೇ ಕೂಡಲಸಂಗಮ ಪೀಠ ಬಿಟ್ಟು ಹೋಗುತ್ತೇನೆ. ನೀವು ಯಾರಾದರೂ ಸ್ವಾಮೀಜಿಗಳ ಜೊತೆ ನೇತೃತ್ವ ವಹಿಸಿಕೊಳ್ಳಿ. ನಾನು ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ, ನಿಮ್ಮ ಹೋರಾಟಕ್ಕೆ ಬೆಂಬಲ ಕೊಡುತ್ತೇನೆ. ನಾವು ಕಷ್ಟ ಪಟ್ಟು ಹೋರಾಟ ಮಾಡುತ್ತಿದ್ದರೆ, ಕೆಲವರು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ನಾನು ಶ್ರೀ ಮಠ ಕಟ್ಟಲು ಅಥವಾ ನನ್ನ ವೈಯಕ್ತಿಕ ಬೆಳವಣಿಗೆಗಾಗಿ ಹೋರಾಟ ಮಾಡುತ್ತಿಲ್ಲ. ಇಂತಹ ದೊಡ್ಡ ಚಳವಳಿಯನ್ನು ಹತ್ತಿಕ್ಕುವ ಕೆಲಸವನ್ನು ಯಾರೂ ಮಾಡಬಾರದು ಎಂದು ಕಿಡಿ ಕಾರಿದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

19 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

19 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

19 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

20 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

21 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

21 hours ago