Featured

ಪಂಚರಾಜ್ಯ ಚುನಾವಣೆ : ಛತ್ತೀಸ್‌ಗಢ, ಮಿಜೋರಾಂನಲ್ಲಿ ಮೊದಲ ಹಂತದ ಮತದಾನ – vishwanews24

ಪಂಚರಾಜ್ಯ ಚುನಾವಣೆ : ಛತ್ತೀಸ್‌ಗಢ, ಮಿಜೋರಾಂನಲ್ಲಿ ಮೊದಲ ಹಂತದ ಮತದಾನ

ರಾಯ್ ಪುರ/ಐಜ್ವಾಲ್ : ಪಂಚರಾಜ್ಯ ಚುನಾವಣೆಗಳ ಪೈಕಿ ಇಂದು ಛತ್ತೀಸ್‌ಗಢ ಮತ್ತು ಮಿಜೋರಾಂನಲ್ಲಿ ಮೊದಲ ಹಂತ ಮತದಾನ ನಡೆಯುತ್ತಿದ್ದು, ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗಳಿಗೆ ಭೇಟಿ ನೀಡಿ ಮತ ಚಲಾವಣೆ ಮಾಡುತ್ತಿದ್ದಾರೆ.

ಭದ್ರತಾ ದೃಷ್ಟಿಯಿಂದ ಚುನಾವಣಾ ಆಯೋಗವು ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಸಲು ನಿರ್ಧರಿಸಿದೆ. ಇಂದು ಛತ್ತೀಸ್‌ಗಢದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣೆಗೆ ಮತದಾನ ಶುರುವಾಗಿದ್ದು, ಒಟ್ಟು 20 ಕ್ಷೇತ್ರಗಳ 223 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು ನಿರ್ಧರಿಸಲಿದ್ದಾರೆ. ಇದಾದ ನಂತರ ನವೆಂಬರ್ 17 ರಂದು ಎರಡನೇ ಹಂತದಲ್ಲಿ 70 ಸ್ಥಾನಗಳಿಗೆ ಮತದಾನ ನಡೆಯಲಿದೆ. ಇಂದು ಬೆಳಗ್ಗೆ 7ರಿಂದ ಮಧ್ಯಾಹ್ನ 3ರವರೆಗೆ 10 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 10 ಕ್ಷೇತ್ರಗಳಲ್ಲಿ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ಅದೇ ರೀತಿ ಮಿಜೋರಾಂನ ಎಲ್ಲ 40 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಮತದಾರರು ಸರತಿ ಸಾಲಿನಲ್ಲಿ ನಿಂತು ಮತಗಳನ್ನು ಚಲಾಯಿಸುತ್ತಿದ್ದಾರೆ. ಮಿಜೋರಾಂನಲ್ಲಿ ಆಡಳಿತಾರೂಢ ಮಿಜೋ ನ್ಯಾಶನಲ್‌ ಫ್ರಂಟ್‌, ವಿಪಕ್ಷ ಜೊರಾಂ ಪೀಪಲ್ಸ್‌ ಫ್ರಂಟ್‌ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 18 ಮಹಿಳೆಯರು ಸೇರಿ 174 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.

ಈ ವಿಧಾನಸಭಾ ಚುನಾವಣೆಗಳು ಕೇಂದ್ರದಲ್ಲಿ ಬಿಜೆಪಿ, ಹೊಸದಾಗಿ ರೂಪುಗೊಂಡ ವಿರೋಧ ಪಕ್ಷವಾದ ಇಂಡಿಯಾ ಬಣ ಹಾಗೂ ಪ್ರಾದೇಶಿಕ ಪಕ್ಷಗಳಿಗೆ ಅಗ್ನಿಪರೀಕ್ಷೆ ಎಂದು ಪರಿಗಣಿಸಲಾಗಿದೆ ಮತ್ತು ಇದರ ಫಲಿತಾಂಶವು ಮುಂಬರುವ 2024 ರ ಲೋಕಸಭಾ ಚುನಾವಣೆಯ ರೂಪುರೇಷೆ ಮೇಲೆ ಪ್ರಭಾವ ಬೀರುವುದು ಖಚಿತ ಎಂದು ತಿಳಿದು ಬಂದಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago