ಉಡುಪಿ : ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಅಂಬಲ್ಪಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಜಂಟಿ ಆಶ್ರಯದಲ್ಲಿ ಅಂಬಲಪಾಡಿ ಪಂಚಾಯತ್ ಮಟ್ಟದ, ಪಂಚಾಯತ್ ಚುನಾವಣೆಯ ಪೂರ್ವಭಾವಿ ಕಾರ್ಯಕರ್ತರ ಸಭೆ ಕಪ್ಪೆಟ್ಟು ರವೀಶ್ ಪೂಜಾರಿ ಮನೆಯಲ್ಲಿ ಜರಗಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ಮಾತನಾಡುತ್ತಾ ಇತ್ತೀಚಿಗೆ ನೆರೆ ಬಂದಾಗ ಕಿದಿಯೂರು, ಬಂಕೇರಕಟ್ಟೆ, ಮಜ್ಜಿಗೆಪಾದೆ ದಡ್ಡಿ, ಮೊದಲಾದ ಪ್ರದೇಶದಲ್ಲಿ ಅಧಿಕಾರಿಗಳಿಗಿಂತ ಮೊದಲೇ ನಮ್ಮ ಪಕ್ಷದ ಕಾರ್ಯಕರ್ತರು ನೆರೆ ಪೀಡಿತ ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ ಸೇವಾ ಕಾರ್ಯವನ್ನು ಶ್ಲಾಘಿಸಿದರು. ಮುಂಬರುವ ಪಂಚಾಯತ್ ಚುನಾವಣೆಗೆ ಸ್ಥಳೀಯ ಚಿರಪರಿಚಿತ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಾರ್ಯಕರ್ತರ ಆದ್ಯ ಕರ್ತವ್ಯ ಎಂದು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಮಿತಿಯನ್ನು ರಚಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ ಅವರು ಮಾತನಾಡಿದರು.
ಸಭೆಯಲ್ಲಿ ಕೀರ್ತಿ ಶೆಟ್ಟಿ ಅಂಬಲಪಾಡಿ, ಗಣೇಶ್ ನೆರ್ಗಿ, ವೀಕ್ಷಕರಾದ ವಿಜಯ ಪೂಜಾರಿ, ಸುರೇಂದ್ರ ಆಚಾರ್ಯ, ನಾರಾಯಣ ಕುಂದರ್, ಪಂಚಾಯತ್ನ ನಿಕಟಪೂರ್ವ ಸದಸ್ಯರಾದ ಲಕ್ಷಣ ಪೂಜಾರಿ, ಸುರೇಶ್ ಪೂಜಾರಿ, ಶಕುಂತಳ, ರೀಟಾ ಗಾಮ, ಪೀರು ಸಾಹೇಬ್, ಜೆರೊಮ್ ಅಂದ್ರಾದೆ, ಲೂವಿಸ್ ಲೋಬೊ, ದಯಾನಂದ ಪೂಜಾರಿ, ಜ್ಯೋತಿ, ಉದಯ, ಮಹೇಶ್ ಶೆಟ್ಟಿ, ಸದಾನಂದ ಪೂಜಾರಿ, ಜಗನ್ನಾಥ ಪೂಜಾರಿ, ಮೋಹಿನಿ ಭಾಸ್ಕರ್ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಸಾಯಿರಾಜ್ ಕೋಟ್ಯಾನ್ ಸ್ವಾಗತಿಸಿದರು. ರವೀಶ್ ಪೂಜಾರಿ ವಂದಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾಯದರ್ಶಿ ಜನಾರ್ದನ ಭಂಡಾರ್ಕಾರ್ ಕಾರ್ಯಕ್ರಮ ನಿರೂಪಿಸಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…