Featured

ಪಂಚಾಯತ್ ರಾಜ್ ಆಡಳಿತ ಸ್ಥಗಿತವಾಗಿದ್ದರೂ ಸರ್ಕಾರ ಮೌನ ವಹಿಸುವುದು ಸರಿಯಲ್ಲ ; ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ – vishwanews24

ಪಂಚಾಯತ್ ರಾಜ್ ಆಡಳಿತ ಸ್ಥಗಿತವಾಗಿದ್ದರೂ ಸರ್ಕಾರ ಮೌನ ವಹಿಸುವುದು ಸರಿಯಲ್ಲ ; ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ಉಡುಪಿ: ಕರ್ನಾಟಕ ರಾಜ್ಯದ ಸರಿ ಸುಮಾರು ೬,೦೦೦ದಷ್ಟು ಗ್ರಾಮ ಪಂಚಾಯತಿಗಳು ಆಡಳಿತ ವ್ಯವಸ್ಥೆ ಸಿಬ್ಬಂದಿಗಳ ಮುಷ್ಕರದಿಂದಾಗಿ ಸ್ಥಗಿತಆಗಿದೆ. ಈ ಹಿನ್ನೆಲೆಯಲ್ಲಿ ತಾವು ಮಧ್ಯಪ್ರವೇಶಿಸಿ, ಗ್ರಾಮೀಣಾಭಿವೃದ್ಧಿ ಸಚಿವರು ಮತ್ತು ಸಿಬ್ಬಂದಿ ಗಳ ಸಂಘಟನೆಯ ಮುಖಂಡರನ್ನು ಕರೆದು ಸಮಸ್ಯೆ ಬಗೆಹರಿಸಬೇಕೆಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು, ನೀರು ಸರಬರಾಜು ಸಿಬ್ಬಂದಿಗಳು, ಸ್ವಚ್ಛತಾ ಕಾರ್ಯಕರ್ತರ ಸಹಿತ ಇಡೀ ಪಂಚಾಯತಿಯ ಕಾರ್ಯಾಂಗ ಕೆಲಸವನ್ನು ಸ್ಥಗಿತ ಗೊಳಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್ ಸೇರಿದಂತೆ, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಪ್ರತಿಭ ಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಪಂಚಾಯತ್‌ನ ಸಣ್ಣಪುಟ್ಟ ಕೆಲಸವು ಸಹ ಆಗದಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗ್ರಾಪಂಗಳ ಸಾಮಾನ್ಯ ಸಭೆಗಳು ನಡೆಯದೆ ಸ್ಥಳೀಯಾಡಳಿತದಿಂದ ಸಿಗಬೇಕಾದ ಪರವಾನಿಗೆಗಳು, ನೀರು ಸರಬ ರಾಜು, ತೆರಿಗೆ ಸಂಗ್ರಹ ವ್ಯವಸ್ಥೆಗಳಿಂದ ಜನಸಾಮಾನ್ಯರು ವಂಚಿತರಾಗುತ್ತಿದ್ದಾರೆ. ಇಷ್ಟೆಲ್ಲಾ ನಡೆದು ವಾರಗಟ್ಟಲೆ ಪಂಚಾಯತ್ ರಾಜ್ ಆಡಳಿತ ಸ್ಥಗಿತವಾಗಿದ್ದರೂ ಸರ್ಕಾರ ಮೌನ ವಹಿಸುವುದು ಸರಿಯಲ್ಲ ಎಂದವರು ಹೇಳಿದ್ದಾರೆ.

ಪಂಚಾಯತ್ ಸಿಬ್ಬಂದಿಗಳು ಸರಳವಾದ ಬೇಡಿಕೆಯನ್ನು ಮುಂದಿಟ್ಟಿದ್ದು, ಕೆಡಿಪಿ ಸಭೆ ನಡೆಸಲು ತಮಗಿರುವ ಸಮಸ್ಯೆ ಯನ್ನು ವಿವರಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಬಿ- ದರ್ಜೆ ನೌಕರರನ್ನಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ದ್ದಾರೆ. ಈಗಾಗಲೇ ಕಡತ ಒಂದು ಹಂತದಲ್ಲಿ ವಿಲೇವಾರಿ ಆಗಬೇಕಾಗಿದೆ. ಆರೇಳು ವರ್ಷಗಳ ಕಾಲ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಜಿಲ್ಲಾಮಟ್ಟದಲ್ಲಿ ಕೌನ್ಸಿಲ್ ಮೂಲಕ ವರ್ಗಾಯಿಸಬೇಕೆಂಬ ಅವರ ಬೇಡಿಕೆ ಅರ್ಥಪೂರ್ಣವಾಗಿದೆ.

ಅದೇ ರೀತಿ ಜೇಷ್ಠತೆ ಪಟ್ಟಿಯನ್ನು ವಿಳಂಬವಿಲ್ಲದೆ ಅಂತಿಮಗೊಳಿಸಿ, ಭಡ್ತಿ ಕ್ರಮ ಕೈಗೊಳ್ಳಬೇಕೆಂಬ ಸಿಬ್ಬಂದಿಗಳ ಆಗ್ರಹ ಪರಿಗಣಿಸುವಂತಹದ್ದು. ಉದ್ಯೋಗ ಖಾತ್ರಿ ಯೋಜನೆ ಮತ್ತು ವೃಂದ ನೇಮಕಾತಿ ನಿಯಮಗಳನ್ನು ರಚಿಸಲು ಸರ್ಕಾರಕ್ಕೆ ಸಾಧ್ಯವಾಗಲಿದೆ. ಕರ ವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್‌ಗಳು, ನೀರುಗಂಟಿ ಜವಾನ ಮತ್ತು ಸ್ವಚ್ಛತೆಗಾರರ ವೇತನ ಪರಿಷ್ಕರಣಿಯನ್ನು ಸರಕಾರ ಮಾನವೀಯ ನೆಲೆಯಲ್ಲಿ ಮಾಡಬಹುದಾಗಿದೆ. ಈ ಸರಳವಾದ ಬೇಡಿಕೆಯನ್ನು ಆದ್ಯತೆಯ ಮೇಲೆ ಕೈಗೆತ್ತಿಕೊಂಡರೆ ಪಂಚಾಯತ್ ನೌಕರರ ಸತ್ಯಾಗ್ರಹ ಮುಗಿಯುವ ಸಾಧ್ಯತೆ ಇದೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಧರಣಿ ಹೀಗೆ ಮುಂದುವರಿದರೆ ಪಂಚಾಯತ್‌ರಾಜ್ ಆಡಳಿತ ಸ್ಥಗಿತ ಗೊಳ್ಳುವ ಸಂಭವವಿದ್ದು, ಕರ್ನಾಟಕ ಮುಖ್ಯಮಂತ್ರಿಗಳಾದ ನೀವು ಪಂಚಾಯತ್ ರಾಜ್ ಸಚಿವರೊಡನೆ ಮಧ್ಯಪ್ರವೇಶಿಸಿ ವಿಧಾನಸೌಧದಲ್ಲಿ ತುರ್ತು ಸಭೆಯನ್ನು ಕರೆದು ಸಮಸ್ಯೆಯನ್ನು ಬಗೆಹರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago