Featured

ಪಂಚೆಯುಟ್ಟು ಬಂದಿದ್ದ ರೈತನಿಗೆ ಅವಮಾನಿಸಿದ್ದ ಜಿಟಿ ಮಾಲ್‌ ಆಡಳಿತ ಮಂಡಳಿಯಿಂದ ಸನ್ಮಾನ – vishwanews24

ಪಂಚೆಯುಟ್ಟು ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ

ಬೆಂಗಳೂರು: ಪಂಚೆಯುಟ್ಟು ಬಂದಿದ್ದ ರೈತನಿಗೆ  ಪ್ರವೇಶ ನಿರಾಕರಿಸಿ ಅವಮಾನಿಸಿದ್ದಕ್ಕೆ ಜಿಟಿ ಮಾಲ್‌  ಆಡಳಿತ ಮಂಡಳಿ ಕ್ಷಮೆಯಾಚಿಸಿದೆ.

ಘಟನೆ ಕುರಿತು ಸ್ಪಷ್ಟನೆ ನೀಡಿದ ಸೆಕ್ಯೂರಿಟಿ ಅರುಣ್‌, ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ. ಮ್ಯಾನೇಜ್‌ಮೆಂಟ್‌ ಅವರಿಂದ ಉತ್ತರ ಬರುವ ತನಕ ಕಾಯಿಸಿದ್ದೆವು ಅಷ್ಟೇ ಎಂದು ತಿಳಿಸಿದ್ದಾರೆ.

ನಿನ್ನೆ ಮಧ್ಯಾಹ್ನವೂ ವ್ಯಕ್ತಿಯೊಬ್ಬರು ಪಂಚೆ ಧರಿಸಿ ಮಾಲ್‌ಗೆ ಬಂದಿದ್ದರು. ಪಂಚೆಯನ್ನು ಮೊಣಕಾಲಿನ ತನಕ ಉಟ್ಕೊಂಡು ನಿಂತಿದ್ರು. ಆಗ ಕೆಳಗಿನ ಫ್ಲೋರ್‌ನಲ್ಲಿ ಬರ್ತ್‌ಡೇ ಪಾರ್ಟಿಯ ಇವೆಂಟ್ ನಡೆಯುತ್ತಿತ್ತು. ಈ ವಿಚಾರವನ್ನು ಮ್ಯಾನೇಜ್‌ಮೆಂಟ್‌ ಗಮನಕ್ಕೆ ತಂದಿದ್ದೆವು ಎಂದಿದ್ದಾರೆ.

ಸಂಜೆ ಮತ್ತೆ ರೈತನೊಬ್ಬ ಪಂಚೆ ಉಟ್ಟುಕೊಂಡು ಬಂದಿದ್ದರು. ಈ ಸಮಯದಲ್ಲಿ ನಾವು ತಡೆದು, ಮ್ಯಾನೇಜ್‌ಮೆಂಟ್‌ ಗಮನಕ್ಕೆ ತಂದಿದ್ದೇವೆ. ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ‌. ಮ್ಯಾನೇಜ್‌ಮೆಂಟ್‌ ಅವರಿಂದ ಉತ್ತರ ಬರುವ ತನಕ ಕಾಯಿಸಿದ್ದೆವು ಅಷ್ಟೆ ಎಂದು ಹೇಳಿದ್ದಾರೆ.

ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದಕ್ಕೆ ಮಾಲ್‌ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಾಲ್‌ ಮುಂದೆ ಪ್ರತಿಭಟನೆ ನಡೆಸಿದರು.

ನಿನ್ನೆ ರೈತ ಫಕೀರಪ್ಪಗೆ ಪ್ರವೇಶ ನಿರಾಕರಿಸಿ ಜಿಟಿ ಮಾಲ್‌ನಲ್ಲಿ ಅವಮಾನಿಸಲಾಗಿತ್ತು. ಇಂದು ಅದೇ ಮಾಲ್‌ ಆಡಳಿತ ಮಂಡಳಿಯ ಉಸ್ತುವಾರಿ ಸುರೇಶ್‌ ಅವರಿಂದ ರೈತ ಫಕೀರಪ್ಪರನ್ನು ಸನ್ಮಾನಿಸಲಾಯಿತು. ಶಾಲು, ಹೂವಿನ ಹಾರ ಹಾಕಿ ಸನ್ಮಾನಿಸಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

17 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago