ಬೆಂಗಳೂರು: ಪಂಚೆಯುಟ್ಟು ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದಕ್ಕೆ ಜಿಟಿ ಮಾಲ್ ಆಡಳಿತ ಮಂಡಳಿ ಕ್ಷಮೆಯಾಚಿಸಿದೆ.
ಘಟನೆ ಕುರಿತು ಸ್ಪಷ್ಟನೆ ನೀಡಿದ ಸೆಕ್ಯೂರಿಟಿ ಅರುಣ್, ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ. ಮ್ಯಾನೇಜ್ಮೆಂಟ್ ಅವರಿಂದ ಉತ್ತರ ಬರುವ ತನಕ ಕಾಯಿಸಿದ್ದೆವು ಅಷ್ಟೇ ಎಂದು ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನವೂ ವ್ಯಕ್ತಿಯೊಬ್ಬರು ಪಂಚೆ ಧರಿಸಿ ಮಾಲ್ಗೆ ಬಂದಿದ್ದರು. ಪಂಚೆಯನ್ನು ಮೊಣಕಾಲಿನ ತನಕ ಉಟ್ಕೊಂಡು ನಿಂತಿದ್ರು. ಆಗ ಕೆಳಗಿನ ಫ್ಲೋರ್ನಲ್ಲಿ ಬರ್ತ್ಡೇ ಪಾರ್ಟಿಯ ಇವೆಂಟ್ ನಡೆಯುತ್ತಿತ್ತು. ಈ ವಿಚಾರವನ್ನು ಮ್ಯಾನೇಜ್ಮೆಂಟ್ ಗಮನಕ್ಕೆ ತಂದಿದ್ದೆವು ಎಂದಿದ್ದಾರೆ.
ಸಂಜೆ ಮತ್ತೆ ರೈತನೊಬ್ಬ ಪಂಚೆ ಉಟ್ಟುಕೊಂಡು ಬಂದಿದ್ದರು. ಈ ಸಮಯದಲ್ಲಿ ನಾವು ತಡೆದು, ಮ್ಯಾನೇಜ್ಮೆಂಟ್ ಗಮನಕ್ಕೆ ತಂದಿದ್ದೇವೆ. ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ. ಮ್ಯಾನೇಜ್ಮೆಂಟ್ ಅವರಿಂದ ಉತ್ತರ ಬರುವ ತನಕ ಕಾಯಿಸಿದ್ದೆವು ಅಷ್ಟೆ ಎಂದು ಹೇಳಿದ್ದಾರೆ.
ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದಕ್ಕೆ ಮಾಲ್ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಾಲ್ ಮುಂದೆ ಪ್ರತಿಭಟನೆ ನಡೆಸಿದರು.
ನಿನ್ನೆ ರೈತ ಫಕೀರಪ್ಪಗೆ ಪ್ರವೇಶ ನಿರಾಕರಿಸಿ ಜಿಟಿ ಮಾಲ್ನಲ್ಲಿ ಅವಮಾನಿಸಲಾಗಿತ್ತು. ಇಂದು ಅದೇ ಮಾಲ್ ಆಡಳಿತ ಮಂಡಳಿಯ ಉಸ್ತುವಾರಿ ಸುರೇಶ್ ಅವರಿಂದ ರೈತ ಫಕೀರಪ್ಪರನ್ನು ಸನ್ಮಾನಿಸಲಾಯಿತು. ಶಾಲು, ಹೂವಿನ ಹಾರ ಹಾಕಿ ಸನ್ಮಾನಿಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…