Featured

ಪಂಚ ಭಾಷೆಯಲ್ಲಿ ‘ದಮಯಂತಿ’ಯಾಗಿ ಅಬ್ಬರಿಸಲಿದ್ದಾರೆ ರಾಧಿಕಾ ಕುಮಾರಸ್ವಾಮಿ – Vishwanews24

ಬೆಂಗಳೂರು:ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರ ಸ್ವಾಮಿ ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಈಗಾಗಲೆ ‘ದಮಯಂತಿ’ಯಾಗಿ ಸದ್ದು ಮಾಡುತ್ತಿರುವ ರಾಧಿಕಾ ಇದೆ ತಿಂಗಳು ಅಭಿಮಾನಿಗಳ ಮುಂದೆ ಬರಲಿದ್ದಾರೆ.  ರಾಧಿಕಾ ಅಭಿನಯದ ‘ದಮಯಂತಿ’ ಚಿತ್ರದ ಟೀಸರ್ ಮೂಲಕ ಎಂಟ್ರಿ ಕೊಡಲಿದ್ದಾರೆ.

‘ದಮಯಂತಿ’ ಚಿತ್ರದ ಟೀಸರ್ ಈ ತಿಂಗಳಾಂತ್ಯದಲ್ಲಿ ತೆರೆಗೆ ಬರುತ್ತಿದೆ. ಈಗಾಗಲೆ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ‘ದಮಯಂತಿ’ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ವಿಶೇಷ ಅಂದ್ರೆ ಚಿತ್ರ ಐದು ಭಾಷೆಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ.

ಫಸ್ಟ್ ಲುಕ್ ಮೂಲಕವೇ ಗಮನಸೆಳೆದಿತ್ತು ನಟಿ ರಾಧಿಕಾ ಕುಮಾರಸ್ವಾಮಿ ನಟನೆಯ ‘ದಮಯಂತಿ’ ಸಿನಿಮಾ. ಕನ್ನಡದ ಜತೆಗೆ ಐದು ಭಾಷೆಗಳಲ್ಲಿ ಚಿತ್ರ ತೆರೆಗೆ ಬರಲಿದೆ ಎಂಬುದರ ಬಗ್ಗೆಯೂ ನಿರ್ದೇಶಕ ನವರಸನ್ ಮಾಹಿತಿ ನೀಡಿದ್ದರು. ಅದರಂತೆ ಈಗ ಐದು ಭಾಷೆಯಲ್ಲಿ ಟೀಸರ್ ಬಿಡುಗಡೆ ಮಾಡುವ ಉತ್ಸಾಹದಲ್ಲಿದ್ದಾರವರು. ಕನ್ನಡದ ಜತೆಗೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಇದೇ ತಿಂಗಳಾಂತ್ಯಕ್ಕೆ ಚಿತ್ರದ ಟೀಸರ್ ಬಿಡುಗಡೆ ಮಾಡಲು ಯೋಜನೆ ರೂಪಿಸಿದ್ದಾರೆ.

ಸದ್ಯ ಟೀಸರ್ ಕೂಡ ಐದು ಭಾಷೆಯಲ್ಲಿ ರಿಲೀಸ್ ಮಾಡುತ್ತಿದೆ ಚಿತ್ರತಂಡ. ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಿಂದಿಯಲ್ಲೂ ತೆರೆಗೆ ಬರುತ್ತಿದೆ.  ಹಿಂದಿ ಮತ್ತು ಮಲಯಾಳಂಗೆ ‘ದಮಯಂತಿ’ ಡಬ್ ಮಾಡಲಾಗಿದೆ. ತಮಿಳು ಮತ್ತು ತೆಲುಗು ಭಾಷೆಯಲ್ಲಿ ಕನ್ನಡದಂತೆ ನೇರವಾಗಿ ಚಿತ್ರೀಕರಣ ಮಾಡಿರುವುದು ವಿಶೇಷ.

ಐದು ಭಾಷೆಯಲ್ಲಿ ರಿಲೀಸ್ ಆಗುತ್ತಿರುವ ಟೀಸರ್ ಅನ್ನು, ಆಯಾಯ ಭಾಷೆಯಲ್ಲಿ ಅಲ್ಲಿನ ಸ್ಟಾರ್ ನಟರ ಬಳಿ ಅದ್ಧೂರಿಯಾಗಿ ರಿಲೀಸ್ ಮಾಡಿಸುವ ಪ್ಲಾನ್ ಮಾಡಿದೆ ಚಿತ್ರತಂಡ. ಈ ತಿಂಗಳ ಅಂತ್ಯಕ್ಕೆ ಟೀಸರ್ ರಿಲೀಸ್ ಆದ್ರೆ ಮುಂದಿನ ತಿಂಗಳು ಆಗಸ್ಟ್ ನಲ್ಲಿ ಚಿತ್ರದ ಹಾಡುಗಳು ತೆರೆಗೆ ಬರುವ ಸಾಧ್ಯತೆ ಇದೆ.

ದಮಯಂತಿ ನವರಸನ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಈಗಾಗಲೆ ರಿಲೀಸ್ ಆಗಿರುವ ರಾಧಿಕಾ ಕುಮಾರಸ್ವಾಮಿ ಅವರ ಒಂದಿಷ್ಟು ಲುಕ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಸದ್ಯ ಐದು ಭಾಷೆಯಲ್ಲಿ ಅಬ್ಬರಿಸಲು ಸಿದ್ಧವಾಗಿರುವ ದಮಯಂತಿ ಸೆಪ್ಟಂಬರ್ ನಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

4 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

19 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

35 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago