ಬೆಂಗಳೂರು:ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರ ಸ್ವಾಮಿ ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಈಗಾಗಲೆ ‘ದಮಯಂತಿ’ಯಾಗಿ ಸದ್ದು ಮಾಡುತ್ತಿರುವ ರಾಧಿಕಾ ಇದೆ ತಿಂಗಳು ಅಭಿಮಾನಿಗಳ ಮುಂದೆ ಬರಲಿದ್ದಾರೆ. ರಾಧಿಕಾ ಅಭಿನಯದ ‘ದಮಯಂತಿ’ ಚಿತ್ರದ ಟೀಸರ್ ಮೂಲಕ ಎಂಟ್ರಿ ಕೊಡಲಿದ್ದಾರೆ.
‘ದಮಯಂತಿ’ ಚಿತ್ರದ ಟೀಸರ್ ಈ ತಿಂಗಳಾಂತ್ಯದಲ್ಲಿ ತೆರೆಗೆ ಬರುತ್ತಿದೆ. ಈಗಾಗಲೆ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ‘ದಮಯಂತಿ’ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ವಿಶೇಷ ಅಂದ್ರೆ ಚಿತ್ರ ಐದು ಭಾಷೆಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ.
ಫಸ್ಟ್ ಲುಕ್ ಮೂಲಕವೇ ಗಮನಸೆಳೆದಿತ್ತು ನಟಿ ರಾಧಿಕಾ ಕುಮಾರಸ್ವಾಮಿ ನಟನೆಯ ‘ದಮಯಂತಿ’ ಸಿನಿಮಾ. ಕನ್ನಡದ ಜತೆಗೆ ಐದು ಭಾಷೆಗಳಲ್ಲಿ ಚಿತ್ರ ತೆರೆಗೆ ಬರಲಿದೆ ಎಂಬುದರ ಬಗ್ಗೆಯೂ ನಿರ್ದೇಶಕ ನವರಸನ್ ಮಾಹಿತಿ ನೀಡಿದ್ದರು. ಅದರಂತೆ ಈಗ ಐದು ಭಾಷೆಯಲ್ಲಿ ಟೀಸರ್ ಬಿಡುಗಡೆ ಮಾಡುವ ಉತ್ಸಾಹದಲ್ಲಿದ್ದಾರವರು. ಕನ್ನಡದ ಜತೆಗೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಇದೇ ತಿಂಗಳಾಂತ್ಯಕ್ಕೆ ಚಿತ್ರದ ಟೀಸರ್ ಬಿಡುಗಡೆ ಮಾಡಲು ಯೋಜನೆ ರೂಪಿಸಿದ್ದಾರೆ.
ಸದ್ಯ ಟೀಸರ್ ಕೂಡ ಐದು ಭಾಷೆಯಲ್ಲಿ ರಿಲೀಸ್ ಮಾಡುತ್ತಿದೆ ಚಿತ್ರತಂಡ. ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಿಂದಿಯಲ್ಲೂ ತೆರೆಗೆ ಬರುತ್ತಿದೆ. ಹಿಂದಿ ಮತ್ತು ಮಲಯಾಳಂಗೆ ‘ದಮಯಂತಿ’ ಡಬ್ ಮಾಡಲಾಗಿದೆ. ತಮಿಳು ಮತ್ತು ತೆಲುಗು ಭಾಷೆಯಲ್ಲಿ ಕನ್ನಡದಂತೆ ನೇರವಾಗಿ ಚಿತ್ರೀಕರಣ ಮಾಡಿರುವುದು ವಿಶೇಷ.
ಐದು ಭಾಷೆಯಲ್ಲಿ ರಿಲೀಸ್ ಆಗುತ್ತಿರುವ ಟೀಸರ್ ಅನ್ನು, ಆಯಾಯ ಭಾಷೆಯಲ್ಲಿ ಅಲ್ಲಿನ ಸ್ಟಾರ್ ನಟರ ಬಳಿ ಅದ್ಧೂರಿಯಾಗಿ ರಿಲೀಸ್ ಮಾಡಿಸುವ ಪ್ಲಾನ್ ಮಾಡಿದೆ ಚಿತ್ರತಂಡ. ಈ ತಿಂಗಳ ಅಂತ್ಯಕ್ಕೆ ಟೀಸರ್ ರಿಲೀಸ್ ಆದ್ರೆ ಮುಂದಿನ ತಿಂಗಳು ಆಗಸ್ಟ್ ನಲ್ಲಿ ಚಿತ್ರದ ಹಾಡುಗಳು ತೆರೆಗೆ ಬರುವ ಸಾಧ್ಯತೆ ಇದೆ.
ದಮಯಂತಿ ನವರಸನ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಈಗಾಗಲೆ ರಿಲೀಸ್ ಆಗಿರುವ ರಾಧಿಕಾ ಕುಮಾರಸ್ವಾಮಿ ಅವರ ಒಂದಿಷ್ಟು ಲುಕ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಸದ್ಯ ಐದು ಭಾಷೆಯಲ್ಲಿ ಅಬ್ಬರಿಸಲು ಸಿದ್ಧವಾಗಿರುವ ದಮಯಂತಿ ಸೆಪ್ಟಂಬರ್ ನಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…