Featured

ಪಂಚ ಭಾಷೆಯಲ್ಲಿ ‘ದಮಯಂತಿ’ಯಾಗಿ ಅಬ್ಬರಿಸಲಿದ್ದಾರೆ ರಾಧಿಕಾ ಕುಮಾರಸ್ವಾಮಿ – Vishwanews24

ಬೆಂಗಳೂರು:ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರ ಸ್ವಾಮಿ ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಈಗಾಗಲೆ ‘ದಮಯಂತಿ’ಯಾಗಿ ಸದ್ದು ಮಾಡುತ್ತಿರುವ ರಾಧಿಕಾ ಇದೆ ತಿಂಗಳು ಅಭಿಮಾನಿಗಳ ಮುಂದೆ ಬರಲಿದ್ದಾರೆ.  ರಾಧಿಕಾ ಅಭಿನಯದ ‘ದಮಯಂತಿ’ ಚಿತ್ರದ ಟೀಸರ್ ಮೂಲಕ ಎಂಟ್ರಿ ಕೊಡಲಿದ್ದಾರೆ.

‘ದಮಯಂತಿ’ ಚಿತ್ರದ ಟೀಸರ್ ಈ ತಿಂಗಳಾಂತ್ಯದಲ್ಲಿ ತೆರೆಗೆ ಬರುತ್ತಿದೆ. ಈಗಾಗಲೆ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ‘ದಮಯಂತಿ’ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ವಿಶೇಷ ಅಂದ್ರೆ ಚಿತ್ರ ಐದು ಭಾಷೆಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ.

ಫಸ್ಟ್ ಲುಕ್ ಮೂಲಕವೇ ಗಮನಸೆಳೆದಿತ್ತು ನಟಿ ರಾಧಿಕಾ ಕುಮಾರಸ್ವಾಮಿ ನಟನೆಯ ‘ದಮಯಂತಿ’ ಸಿನಿಮಾ. ಕನ್ನಡದ ಜತೆಗೆ ಐದು ಭಾಷೆಗಳಲ್ಲಿ ಚಿತ್ರ ತೆರೆಗೆ ಬರಲಿದೆ ಎಂಬುದರ ಬಗ್ಗೆಯೂ ನಿರ್ದೇಶಕ ನವರಸನ್ ಮಾಹಿತಿ ನೀಡಿದ್ದರು. ಅದರಂತೆ ಈಗ ಐದು ಭಾಷೆಯಲ್ಲಿ ಟೀಸರ್ ಬಿಡುಗಡೆ ಮಾಡುವ ಉತ್ಸಾಹದಲ್ಲಿದ್ದಾರವರು. ಕನ್ನಡದ ಜತೆಗೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಇದೇ ತಿಂಗಳಾಂತ್ಯಕ್ಕೆ ಚಿತ್ರದ ಟೀಸರ್ ಬಿಡುಗಡೆ ಮಾಡಲು ಯೋಜನೆ ರೂಪಿಸಿದ್ದಾರೆ.

ಸದ್ಯ ಟೀಸರ್ ಕೂಡ ಐದು ಭಾಷೆಯಲ್ಲಿ ರಿಲೀಸ್ ಮಾಡುತ್ತಿದೆ ಚಿತ್ರತಂಡ. ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಿಂದಿಯಲ್ಲೂ ತೆರೆಗೆ ಬರುತ್ತಿದೆ.  ಹಿಂದಿ ಮತ್ತು ಮಲಯಾಳಂಗೆ ‘ದಮಯಂತಿ’ ಡಬ್ ಮಾಡಲಾಗಿದೆ. ತಮಿಳು ಮತ್ತು ತೆಲುಗು ಭಾಷೆಯಲ್ಲಿ ಕನ್ನಡದಂತೆ ನೇರವಾಗಿ ಚಿತ್ರೀಕರಣ ಮಾಡಿರುವುದು ವಿಶೇಷ.

ಐದು ಭಾಷೆಯಲ್ಲಿ ರಿಲೀಸ್ ಆಗುತ್ತಿರುವ ಟೀಸರ್ ಅನ್ನು, ಆಯಾಯ ಭಾಷೆಯಲ್ಲಿ ಅಲ್ಲಿನ ಸ್ಟಾರ್ ನಟರ ಬಳಿ ಅದ್ಧೂರಿಯಾಗಿ ರಿಲೀಸ್ ಮಾಡಿಸುವ ಪ್ಲಾನ್ ಮಾಡಿದೆ ಚಿತ್ರತಂಡ. ಈ ತಿಂಗಳ ಅಂತ್ಯಕ್ಕೆ ಟೀಸರ್ ರಿಲೀಸ್ ಆದ್ರೆ ಮುಂದಿನ ತಿಂಗಳು ಆಗಸ್ಟ್ ನಲ್ಲಿ ಚಿತ್ರದ ಹಾಡುಗಳು ತೆರೆಗೆ ಬರುವ ಸಾಧ್ಯತೆ ಇದೆ.

ದಮಯಂತಿ ನವರಸನ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಈಗಾಗಲೆ ರಿಲೀಸ್ ಆಗಿರುವ ರಾಧಿಕಾ ಕುಮಾರಸ್ವಾಮಿ ಅವರ ಒಂದಿಷ್ಟು ಲುಕ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಸದ್ಯ ಐದು ಭಾಷೆಯಲ್ಲಿ ಅಬ್ಬರಿಸಲು ಸಿದ್ಧವಾಗಿರುವ ದಮಯಂತಿ ಸೆಪ್ಟಂಬರ್ ನಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago