ಹುಬ್ಬಳ್ಳಿ: ಹೊಂದಾಣಿಕೆ ರಾಜಕೀಯಕ್ಕೆ ಅವಕಾಶ ನೀಡದೆ, ವಿಷಯಾಧಾರಿತ ಚುನಾವಣೆಗೆ ಹೋಗುತ್ತೇವೆ. ಪಂಜಾಬ್ ಮಾದರಿಯಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಆಪ್ ರಾಜ್ಯ ಉಪಾಧ್ಯಕ್ಷ ಭಾಸ್ಕರ ರಾವ್ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಕ್ಕೆ ಕಿತ್ತಾಟ, ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ.
ಇರುವ ಪ್ರಮುಖ ಮೂರು ಪಕ್ಷಗಳು ಪರಸ್ಪರ ಆರೋಪ, ಹಗರಣಗಳ ಪ್ರಸ್ತಾಪಗಳ ಮೂಲಕ ಜನರ ಸಮಸ್ಯೆ, ನೈಜ ವಿಷಯಗಳನ್ನು ಮರೆಮಾಚಿಸಲಾಗುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಈಗಲೇ ಕಿತ್ತಾಟ ಶುರುವಾಗಿದೆ. ಮತದಾರರ ತೀರ್ಪು ಮೊದಲೇ ಸಿಎಂ ನಾನೇ ಎಂಬುದು ಜನತೆಗೆ ಮಾಡುವ ಅವಮಾನವಾಗಿದೆ ಎಂದರು.
ಆಪ್ ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಸೇರಿದಂತೆ ಹತ್ತು ವಿಭಾಗಳನ್ನು ಮಾಡಿದ್ದು, ತರಬೇತಿ, ಜವಾಬ್ದಾರಿ, ಅವಕಾಶ ನೀಡಿಕೆ ಕಾರ್ಯ ಮಾಡುತ್ತಿದೆ. ಗ್ರಾಮೀಣದಲ್ಲೂ ಪಕ್ಷ ಸಂಘಟನೆಗೆ ಒತ್ತು ನೀಡಿದ್ದೇವೆ.
ನಾವು ಅಧಿಕಾರಕ್ಕೆ ಬಂದರ ಏನು ಮಾಡುತ್ತೇವೆ ಎಂಬುದನ್ನು ಮನವರಿಕೆ ಮಾಡುತ್ತೇವೆ. ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆ-ಆಸ್ಪತ್ರೆಗಳನ್ನು ವಿಶ್ವದರ್ಜೆ ಮಾದಿಯಾಗಿ ಮಾಡುತ್ತೇವೆ ಎಂದರು.
ಉತ್ತರ ಕರ್ನಾಟಕದ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಇಲ್ಲಿವರೆಗೆ ಅಧಿಕಾರ ನಡೆಸಿದವರು, ಅಧಿಕಾರದಲ್ಲಿದ್ದವರಿಗೆ ಸ್ಪಷ್ಟ ಚಿಂತನೆ, ನೀಲನಕ್ಷೆ ಇಲ್ಲವಾಗಿದೆ ಎಂದರು.
ಕೇಂದ್ರ ಸರಕಾರ 25 ಕೆ.ಜಿ ಒಳಗಿನ ಆಹಾರ ಧಾನ್ಯಗಳ ಖರೀದಿಗೆ ಜಿಎಸ್ ಟಿ ವಿಧಿಸುತ್ತಿದೆ. ಅಲ್ಲಿಗೆ ತಾನು ಶ್ರೀಮಂತರ ಪರ ಸರಕಾರ ಎಂಬುದನ್ನು ಸಾಬೀತು ಪಡಿಸಿದೆ ಎಂದರು.
ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ಒಂದೋ ಠೇವಣಿ ಕಳೆದುಕೊಂಡು ಬಿಡುತ್ತದೆ ಇಲ್ಲವೆ ಎದುರಾಳಿಗಳ ಠೇವಣಿಯನ್ನು ಹಿಡಿಯಾಗಿ ಕಳೆದು ಬಿಡುತ್ತದೆ. ಕಿಚಡಿ ಸರಕಾರಕ್ಕೆ ಅವಕಾಶ ನೀಡದು. ದೆಹಲಿ,ಪಂಜಾಬ್ ನಲ್ಲಿ ಇದೆ ಆಗಿದೆ ಎಂದರು.
ಕೇಂದ್ರ ಸರಕಾರದ ಅಗ್ನಿಪಥ ಯೋಜನೆಯನ್ನು ವೈಯಕ್ತಿಕವಾಗಿ ಬೆಂಬಲಿಸುತ್ತೇನೆ. ಆದರೆ ಅದರ ಅನುಷ್ಠಾನ, ನಾನೇ ಮಾಡಿದೆ ಎಂಬ ಧೋರಣೆ, ಯುವಕರನ್ನು ದಾರಿ ತಪ್ಪಿಸುವ ಯತ್ನವನ್ನು ವಿರೋಧಿಸುತ್ತೇನೆ ಎಂದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…