Featured

ಪಂಜಾಬ್ ಮಾದರಿಯಲ್ಲಿ ಕರ್ನಾಟಕದಲ್ಲೂ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ : ಭಾಸ್ಕರ ರಾವ್ – Vishwanews24

ಪಂಜಾಬ್ ಮಾದರಿಯಲ್ಲಿ ಕರ್ನಾಟಕದಲ್ಲೂ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ : ಭಾಸ್ಕರ ರಾವ್

ಹುಬ್ಬಳ್ಳಿ: ಹೊಂದಾಣಿಕೆ ರಾಜಕೀಯಕ್ಕೆ ಅವಕಾಶ ನೀಡದೆ, ವಿಷಯಾಧಾರಿತ ಚುನಾವಣೆಗೆ ಹೋಗುತ್ತೇವೆ. ಪಂಜಾಬ್ ಮಾದರಿಯಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಆಪ್ ರಾಜ್ಯ ಉಪಾಧ್ಯಕ್ಷ ಭಾಸ್ಕರ ರಾವ್ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಕ್ಕೆ ಕಿತ್ತಾಟ, ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ.

ಇರುವ ಪ್ರಮುಖ ಮೂರು ಪಕ್ಷಗಳು ಪರಸ್ಪರ ಆರೋಪ, ಹಗರಣಗಳ ಪ್ರಸ್ತಾಪಗಳ ಮೂಲಕ ಜನರ ಸಮಸ್ಯೆ, ನೈಜ ವಿಷಯಗಳನ್ನು ಮರೆಮಾಚಿಸಲಾಗುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಈಗಲೇ ಕಿತ್ತಾಟ ಶುರುವಾಗಿದೆ. ಮತದಾರರ ತೀರ್ಪು ಮೊದಲೇ ಸಿಎಂ ನಾನೇ ಎಂಬುದು ಜನತೆಗೆ ಮಾಡುವ ಅವಮಾನವಾಗಿದೆ ಎಂದರು.

ಆಪ್ ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಸೇರಿದಂತೆ ಹತ್ತು ವಿಭಾಗಳನ್ನು ಮಾಡಿದ್ದು, ತರಬೇತಿ, ಜವಾಬ್ದಾರಿ, ಅವಕಾಶ ನೀಡಿಕೆ ಕಾರ್ಯ ಮಾಡುತ್ತಿದೆ. ಗ್ರಾಮೀಣದಲ್ಲೂ ಪಕ್ಷ ಸಂಘಟನೆಗೆ ಒತ್ತು ನೀಡಿದ್ದೇವೆ.

ನಾವು ಅಧಿಕಾರಕ್ಕೆ ಬಂದರ ಏನು ಮಾಡುತ್ತೇವೆ ಎಂಬುದನ್ನು ಮನವರಿಕೆ ಮಾಡುತ್ತೇವೆ. ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆ-ಆಸ್ಪತ್ರೆಗಳನ್ನು ವಿಶ್ವದರ್ಜೆ ಮಾದಿಯಾಗಿ ಮಾಡುತ್ತೇವೆ ಎಂದರು.

ಉತ್ತರ ಕರ್ನಾಟಕದ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಇಲ್ಲಿವರೆಗೆ ಅಧಿಕಾರ ನಡೆಸಿದವರು, ಅಧಿಕಾರದಲ್ಲಿದ್ದವರಿಗೆ ಸ್ಪಷ್ಟ ಚಿಂತನೆ, ನೀಲನಕ್ಷೆ ಇಲ್ಲವಾಗಿದೆ ಎಂದರು.

ಕೇಂದ್ರ ಸರಕಾರ 25 ಕೆ.ಜಿ ಒಳಗಿನ ಆಹಾರ ಧಾನ್ಯಗಳ ಖರೀದಿಗೆ ಜಿಎಸ್ ಟಿ ವಿಧಿಸುತ್ತಿದೆ. ಅಲ್ಲಿಗೆ ತಾನು ಶ್ರೀಮಂತರ ಪರ ಸರಕಾರ ಎಂಬುದನ್ನು ಸಾಬೀತು ಪಡಿಸಿದೆ ಎಂದರು.

ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ಒಂದೋ ಠೇವಣಿ ಕಳೆದುಕೊಂಡು ಬಿಡುತ್ತದೆ ಇಲ್ಲವೆ ಎದುರಾಳಿಗಳ ಠೇವಣಿಯನ್ನು ಹಿಡಿಯಾಗಿ ಕಳೆದು ಬಿಡುತ್ತದೆ. ಕಿಚಡಿ ಸರಕಾರಕ್ಕೆ ಅವಕಾಶ ನೀಡದು. ದೆಹಲಿ,ಪಂಜಾಬ್ ನಲ್ಲಿ ಇದೆ ಆಗಿದೆ ಎಂದರು.

ಕೇಂದ್ರ ಸರಕಾರದ ಅಗ್ನಿಪಥ ಯೋಜನೆಯನ್ನು ವೈಯಕ್ತಿಕವಾಗಿ ಬೆಂಬಲಿಸುತ್ತೇನೆ. ಆದರೆ ಅದರ ಅನುಷ್ಠಾನ, ನಾನೇ ಮಾಡಿದೆ ಎಂಬ ಧೋರಣೆ, ಯುವಕರನ್ನು ದಾರಿ ತಪ್ಪಿಸುವ ಯತ್ನವನ್ನು ವಿರೋಧಿಸುತ್ತೇನೆ ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago