Featured

ಪಂಜಾಬ್  :  ಮ್ಯಾಜಿಕ್ ನಂಬರ್ ದಾಟಿದ ಎಎಪಿ- ಕಾರ್ಯಕರ್ತರಲ್ಲಿ ಸಂಭ್ರಮಾಚರಣೆ – Vishwanews24

ಪಂಜಾಬ್  :  ಮ್ಯಾಜಿಕ್ ನಂಬರ್ ದಾಟಿದ ಎಎಪಿ- ಕಾರ್ಯಕರ್ತರಲ್ಲಿ ಸಂಭ್ರಮಾಚರಣೆ – Vishwanews24

ಪಂಜಾಬ್: ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷವು ಭಾರೀ ಮುನ್ನಡೆ ಸಾಧಿಸುತ್ತಿದ್ದು, ಗೆಲುವು ಬಹುತೇಕ ಖಚಿತವಾಗಿದೆ. ಇತ್ತ ಮ್ಯಾಜಿಕ್ ನಂಬರ್ ದಾಟುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಮತ ಎಣಿಕೆ ಕೇಂದ್ರಗಳ ಹೊರಗೆ, ಪಕ್ಷದ ಕಚೇರಿ ಸೇರಿದಂತೆ ಹಲವೆಡೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು, ಬೆಂಬಲಿಗರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಒಟ್ಟು 117 ಕ್ಷೇತ್ರಗಳಲ್ಲಿ ಆಪ್ 72 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 20, ಎಸ್ ಎಡಿ 28, ಬಿಜೆಪಿ 4 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

117 ಸ್ಥಾನಗಳ ಪೈಕಿ ಅಧಿಕಾರದ ಗದ್ದುಗೆ ಏರಲು 59 ಸ್ಥಾನಗಳ ಅಗತ್ಯವಿದ್ದು, ಈ ಮ್ಯಾಜಿಕ್ ನಂಬರ್ ನ್ನು ದಾಟಿರುವುದರಿಂದ ಆಮ್ ಆದ್ಮಿ ಪಾರ್ಟಿ ಗೆಲುವಿನತ್ತ ದಾಪುಗಾಲಿಡುತ್ತಿದೆ.

ಈ ನಡುವೆ ಪಂಜಾಬ್ ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಗೆ ಈ ಚುನಾವಣಾ ಫಲಿತಾಂಶ ತೀವ್ರ ಮುಖಭಂಗಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅಮೃತಸರ ಪೂರ್ವ ಕ್ಷೇತ್ರದಲ್ಲಿ 3ನೇ ಸ್ಥಾನಕ್ಕೆ ಕುಸಿದಿದ್ದಾರೆ. ಹಾಲಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಬದೌರ್ ಹಾಗೂ ಚಮ್ ಕೌರ್ ಸಾಹಿಬ್ ಕೂಡಾ ತಮ್ಮ ಕ್ಷೇತ್ರದಲ್ಲಿ ಹಿನ್ನಡೆ ಗಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago