ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ವಿವಿಧ ಗಡಿಯಲ್ಲಿ ಪಂಜಾಬ್-ಹರ್ಯಾಣದ ರೈತರು ಪ್ರತಿಭಟನೆ ನಡೆಸುತ್ತಿರುವ ನಡುವೆ ಪಂಜಾಬ್ ಸ್ಥಳೀಯ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿಗಳಿಸಿದ್ದು, ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ತೀವ್ರ ಹಿನ್ನಡೆ ಅನುಭವಿಸಿದೆ.
ಬುಧವಾರ(ಫೆ.17, 2021) ಪ್ರಕಟಗೊಂಡ ಫಲಿತಾಂಶದ ಪ್ರಕಾರ, ಮೋಗಾ, ಹೋಶಿಯಾರ್ ಪುರ್, ಕಪುರ್ಥಾಲಾ, ಅಬೋಹರ್, ಪಠಾಣ್ ಕೋಟ್, ಬಾಟ್ಲಾ ಮತ್ತು ಬಟಿಂಡಾ ಸೇರಿದಂತೆ ಆರು ಮಹಾನಗರ ಪಾಲಿಕೆಗಳು ಕಾಂಗ್ರೆಸ್ ವಶವಾಗಿರುವುದಾಗಿ ತಿಳಿಸಿದೆ.
ಕಾಂಗ್ರೆಸ್ ಪಕ್ಷವು ಮೊಗಾ, ಹೊಶಿಯಾರ್ ಪುರ, ಕಪುರ್ಥಲ, ಅಬೊಹರ್, ಪಠಾಣ್ ಕೋಟ್, ಬಟಾಲ ಹಾಗೂ ಬಠಿಂಡಾ ಮಹಾನಗರ ಪಾಲಿಕೆಗಳಲ್ಲಿ ಜಯಸಾಧಿಸಿದ್ದು, ಈ ಪೈಕಿ ಬಠಿಂಡಾ ಮಹಾನಗರ ಪಾಲಿಕೆಯು 53 ವರ್ಷಗಳ ಬಳಿಕ ಕಾಂಗ್ರೆಸ್ ತೆಕ್ಕೆಗೆ ಸೇರಿದೆ.
ಇತ್ತೀಚೆಗಿನವರೆಗೆ ಶಿರೋಮಣಿ ಅಕಾಲಿದಳದೊಂದಿಗೆ (ಎಸ್ಎಡಿ) ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸ್ಪರ್ಧಿಸುತ್ತಿತ್ತು. ಇತ್ತೀಚೆಗೆ ಎಸ್ಎಡಿ ತನ್ನ ದೀರ್ಘ ಕಾಲದ ಮೈತ್ರಿ ಪಕ್ಷ ಬಿಜೆಪಿಯಿಂದ ದೂರ ಸರಿದಿತ್ತು. ಈ ಬಾರಿ ಬಿಜೆಪಿ ಹಾಗೂ ಎಸ್ ಎಡಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದು ಬಿಜೆಪಿ ಭಾರೀ ಹಿನ್ನೆಡೆ ಸಾಧಿಸಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…