ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ವಿವಿಧ ಗಡಿಯಲ್ಲಿ ಪಂಜಾಬ್-ಹರ್ಯಾಣದ ರೈತರು ಪ್ರತಿಭಟನೆ ನಡೆಸುತ್ತಿರುವ ನಡುವೆ ಪಂಜಾಬ್ ಸ್ಥಳೀಯ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿಗಳಿಸಿದ್ದು, ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ತೀವ್ರ ಹಿನ್ನಡೆ ಅನುಭವಿಸಿದೆ.
ಬುಧವಾರ(ಫೆ.17, 2021) ಪ್ರಕಟಗೊಂಡ ಫಲಿತಾಂಶದ ಪ್ರಕಾರ, ಮೋಗಾ, ಹೋಶಿಯಾರ್ ಪುರ್, ಕಪುರ್ಥಾಲಾ, ಅಬೋಹರ್, ಪಠಾಣ್ ಕೋಟ್, ಬಾಟ್ಲಾ ಮತ್ತು ಬಟಿಂಡಾ ಸೇರಿದಂತೆ ಆರು ಮಹಾನಗರ ಪಾಲಿಕೆಗಳು ಕಾಂಗ್ರೆಸ್ ವಶವಾಗಿರುವುದಾಗಿ ತಿಳಿಸಿದೆ.
ಕಾಂಗ್ರೆಸ್ ಪಕ್ಷವು ಮೊಗಾ, ಹೊಶಿಯಾರ್ ಪುರ, ಕಪುರ್ಥಲ, ಅಬೊಹರ್, ಪಠಾಣ್ ಕೋಟ್, ಬಟಾಲ ಹಾಗೂ ಬಠಿಂಡಾ ಮಹಾನಗರ ಪಾಲಿಕೆಗಳಲ್ಲಿ ಜಯಸಾಧಿಸಿದ್ದು, ಈ ಪೈಕಿ ಬಠಿಂಡಾ ಮಹಾನಗರ ಪಾಲಿಕೆಯು 53 ವರ್ಷಗಳ ಬಳಿಕ ಕಾಂಗ್ರೆಸ್ ತೆಕ್ಕೆಗೆ ಸೇರಿದೆ.
ಇತ್ತೀಚೆಗಿನವರೆಗೆ ಶಿರೋಮಣಿ ಅಕಾಲಿದಳದೊಂದಿಗೆ (ಎಸ್ಎಡಿ) ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸ್ಪರ್ಧಿಸುತ್ತಿತ್ತು. ಇತ್ತೀಚೆಗೆ ಎಸ್ಎಡಿ ತನ್ನ ದೀರ್ಘ ಕಾಲದ ಮೈತ್ರಿ ಪಕ್ಷ ಬಿಜೆಪಿಯಿಂದ ದೂರ ಸರಿದಿತ್ತು. ಈ ಬಾರಿ ಬಿಜೆಪಿ ಹಾಗೂ ಎಸ್ ಎಡಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದು ಬಿಜೆಪಿ ಭಾರೀ ಹಿನ್ನೆಡೆ ಸಾಧಿಸಿದೆ.
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…
ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…
ಮಲ್ಪೆ : ಬೋಟ್ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…
ಉಡುಪಿ :ಆ. 27 ರಂದು ನೇರ ಸಂದರ್ಶನ ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…