ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ವಿವಿಧ ಗಡಿಯಲ್ಲಿ ಪಂಜಾಬ್-ಹರ್ಯಾಣದ ರೈತರು ಪ್ರತಿಭಟನೆ ನಡೆಸುತ್ತಿರುವ ನಡುವೆ ಪಂಜಾಬ್ ಸ್ಥಳೀಯ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿಗಳಿಸಿದ್ದು, ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ತೀವ್ರ ಹಿನ್ನಡೆ ಅನುಭವಿಸಿದೆ.
ಬುಧವಾರ(ಫೆ.17, 2021) ಪ್ರಕಟಗೊಂಡ ಫಲಿತಾಂಶದ ಪ್ರಕಾರ, ಮೋಗಾ, ಹೋಶಿಯಾರ್ ಪುರ್, ಕಪುರ್ಥಾಲಾ, ಅಬೋಹರ್, ಪಠಾಣ್ ಕೋಟ್, ಬಾಟ್ಲಾ ಮತ್ತು ಬಟಿಂಡಾ ಸೇರಿದಂತೆ ಆರು ಮಹಾನಗರ ಪಾಲಿಕೆಗಳು ಕಾಂಗ್ರೆಸ್ ವಶವಾಗಿರುವುದಾಗಿ ತಿಳಿಸಿದೆ.
ಕಾಂಗ್ರೆಸ್ ಪಕ್ಷವು ಮೊಗಾ, ಹೊಶಿಯಾರ್ ಪುರ, ಕಪುರ್ಥಲ, ಅಬೊಹರ್, ಪಠಾಣ್ ಕೋಟ್, ಬಟಾಲ ಹಾಗೂ ಬಠಿಂಡಾ ಮಹಾನಗರ ಪಾಲಿಕೆಗಳಲ್ಲಿ ಜಯಸಾಧಿಸಿದ್ದು, ಈ ಪೈಕಿ ಬಠಿಂಡಾ ಮಹಾನಗರ ಪಾಲಿಕೆಯು 53 ವರ್ಷಗಳ ಬಳಿಕ ಕಾಂಗ್ರೆಸ್ ತೆಕ್ಕೆಗೆ ಸೇರಿದೆ.
ಇತ್ತೀಚೆಗಿನವರೆಗೆ ಶಿರೋಮಣಿ ಅಕಾಲಿದಳದೊಂದಿಗೆ (ಎಸ್ಎಡಿ) ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸ್ಪರ್ಧಿಸುತ್ತಿತ್ತು. ಇತ್ತೀಚೆಗೆ ಎಸ್ಎಡಿ ತನ್ನ ದೀರ್ಘ ಕಾಲದ ಮೈತ್ರಿ ಪಕ್ಷ ಬಿಜೆಪಿಯಿಂದ ದೂರ ಸರಿದಿತ್ತು. ಈ ಬಾರಿ ಬಿಜೆಪಿ ಹಾಗೂ ಎಸ್ ಎಡಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದು ಬಿಜೆಪಿ ಭಾರೀ ಹಿನ್ನೆಡೆ ಸಾಧಿಸಿದೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…