Featured

ಪಂದ್ಯದ ವೇಳೆ ಹೃದಯಾಘಾತ :  ಬಾಂಗ್ಲಾ ಕ್ರಿಕೆಟ್ ಆಟಗಾರ ತಮೀಮ್ ಇಕ್ಬಾಲ್‌ ಆಸ್ಪತ್ರೆಗೆ ದಾಖಲು – vishwanews24

ಪಂದ್ಯದ ವೇಳೆ ಹೃದಯಾಘಾತ :  ಬಾಂಗ್ಲಾ ಕ್ರಿಕೆಟ್ ಆಟಗಾರ ತಮೀಮ್ ಇಕ್ಬಾಲ್‌ ಆಸ್ಪತ್ರೆಗೆ ದಾಖಲು

ಢಾಕಾ: ಕ್ರಿಕೆಟ್ ಪಂದ್ಯದ ವೇಳೆ ಹೃದಯಾಘಾತವಾಗಿದ್ದರಿಂದ ಬಾಂಗ್ಲಾದೇಶದ ಮಾಜಿ ಕ್ರಿಕೆಟ್ ನಾಯಕ ತಮೀಮ್ ಇಕ್ಬಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ನಡೆದ ದೇಶೀಯ ಕ್ರಿಕೆಟ್ ಪಂದ್ಯದ ವೇಳೆ ಈ ಘಟನೆ ನಡೆದಿದೆ. 36 ವರ್ಷದ ತಮೀಮ್ ಇಕ್ಬಾಲ್ ಅವರು ಮೊಹಮ್ಮದನ್ ಸ್ಪೋರ್ಟಿಂಗ್ ಕ್ಲಬ್‌ ಅನ್ನು ಢಾಕಾ ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್ ನ 50 ಓವರ್ ಪಂದ್ಯದಲ್ಲಿ ಮುನ್ನಡೆಸುತ್ತಿದ್ದರು.

ತಮೀಮ್ ಟಾಸ್ ಚಿಮ್ಮಿಸಲು ಕ್ರೀಡಾಂಗಣದಲ್ಲಿ ಹಾಜರಿದ್ದರು. ಬಳಿಕ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಸಾಗಿಸುವ ಮೊದಲು ಅವರಿಗೆ ಮೈದಾನದಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ತಮೀಮ್ 2007 ರಿಂದ 2023 ರವರೆಗೆ ಎಲ್ಲಾ ಸ್ವರೂಪದ ಕ್ರಿಕೆಟ್ ನಲ್ಲಿ ಬಾಂಗ್ಲಾದೇಶದ ಪರವಾಗಿ 391 ಪಂದ್ಯಗಳನ್ನು ಆಡಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ತಮೀಮ್ 15,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಎಲ್ಲಾ ಮೂರು ಅಂತರರಾಷ್ಟ್ರೀಯ ಕ್ರಿಕೆಟ್ ಸ್ವರೂಪಗಳಲ್ಲಿ ಶತಕಗಳನ್ನು ದಾಖಲಿಸಿದ ಏಕೈಕ ಬಾಂಗ್ಲಾದೇಶದ ಬ್ಯಾಟ್ಸ್‌ಮನ್ ಆಗಿ ಸಾಧನೆ ಮಾಡಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

14 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

15 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

15 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

17 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

17 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

17 hours ago