Featured

ಪಂಪ್ ವೆಲ್ ಪ್ಲೈ ಓವರ್ ಅಗಸ್ಟ್ ನಲ್ಲಿ ಸಂಚಾರಕ್ಕೆ ಮುಕ್ತ : ಸಂಸದ ನಳಿನ್‌ ಕುಮಾರ್‌ ಕಟೀಲು -Vishwanews24

ಮಂಗಳೂರು : ಭಾರಿ ಟ್ರೋಲ್ ಗೆ ಒಳಗಾಗಿದ್ದ ಮಂಗಳೂರಿನ ಎರಡು ಪ್ಲೈಓವರ್ ಗಳ ಕಾಮಗಾರಿ ಕೊನೆಯ ಹಂತ ತಲುಪಿದೆ.

ಆಗಸ್ಟ್‌ ಮೊದಲ ವಾರದಲ್ಲಿ ಪಂಪ್ ವೆಲ್ ಪ್ಲೈಓವರ್ ಕೂಡ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ.

ತೊಕ್ಕೊಟ್ಟು ಹಾಗೂ ಪಂಪ್‌ವೆಲ್‌ ಫ್ಲೈಓವರ್‌ ಕಾಮಗಾರಿಯನ್ನುಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು ಕಳೆದ 6 ತಿಂಗಳಿನಿಂದ ಈ ಎರಡು ಫ್ಲೈಓವರ್‌ ಕಾಮಗಾರಿ ವೇಗ ಪಡೆದುಕೊಂಡಿದೆ. ಸಂಸ್ಥೆಯು ತಾಂತ್ರಿಕ ಸಮಸ್ಯೆ ಎದುರಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ಸೂಚನೆಯ ಮೇರೆಗೆ 55 ಕೋ.ರೂ. ಸಾಲ ಕೂಡ ಸಂಸ್ಥೆಗೆ ನೀಡಲಾಯಿತು.

ಚುನಾವಣೆ ಕಾರಣ ಕಾಮಗಾರಿ ಮತ್ತೆ ವಿಳಂಬ ಹಾಗೂ ನೀತಿಸಂಹಿತೆ ಹಿನ್ನೆಲೆಯಲ್ಲಿ ನಮಗೆ ಮಧ್ಯಪ್ರವೇಶ ಮಾಡಲು ಸಾಧ್ಯವಾಗಿಲ್ಲ. ಈಗ ಯೋಜನೆಗೆ ವೇಗ ದೊರಕಿದೆ. 1 ತಿಂಗಳೊಳಗೆ ಉಜೊಡಿ ಅಂಡರ್‌ಪಾಸ್‌ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ತಾಂತ್ರಿಕ ಸಮಸ್ಯೆಗಳಿಂದಾಗಿ ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಕುಂಠಿತವಾಗಿದ್ದರೂ ಈಗ ಶೇ.98 ಕೆಲಸ ಮುಗಿದಿದ್ದು, ಮುಂದಿನ ವಾರ ಪೂರ್ಣಗೊಳ್ಳಲಿದೆ ಎಂದು ಸಂಸದ ನಳಿನ್ ಹೇಳಿದರು. ಬುಧವಾರ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಜೂನ್ 10ರಂದು ಸೇತುವೆ ಲೋಕಾರ್ಪಣೆ ಆಗಲಿದೆ. ವಾಹನ ಸವಾರರು, ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

24 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

24 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

24 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

1 day ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

1 day ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

1 day ago