ಮಂಗಳೂರು : ಭಾರಿ ಟ್ರೋಲ್ ಗೆ ಒಳಗಾಗಿದ್ದ ಮಂಗಳೂರಿನ ಎರಡು ಪ್ಲೈಓವರ್ ಗಳ ಕಾಮಗಾರಿ ಕೊನೆಯ ಹಂತ ತಲುಪಿದೆ.
ಆಗಸ್ಟ್ ಮೊದಲ ವಾರದಲ್ಲಿ ಪಂಪ್ ವೆಲ್ ಪ್ಲೈಓವರ್ ಕೂಡ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ದ.ಕ. ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ತೊಕ್ಕೊಟ್ಟು ಹಾಗೂ ಪಂಪ್ವೆಲ್ ಫ್ಲೈಓವರ್ ಕಾಮಗಾರಿಯನ್ನುಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು ಕಳೆದ 6 ತಿಂಗಳಿನಿಂದ ಈ ಎರಡು ಫ್ಲೈಓವರ್ ಕಾಮಗಾರಿ ವೇಗ ಪಡೆದುಕೊಂಡಿದೆ. ಸಂಸ್ಥೆಯು ತಾಂತ್ರಿಕ ಸಮಸ್ಯೆ ಎದುರಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸೂಚನೆಯ ಮೇರೆಗೆ 55 ಕೋ.ರೂ. ಸಾಲ ಕೂಡ ಸಂಸ್ಥೆಗೆ ನೀಡಲಾಯಿತು.
ಚುನಾವಣೆ ಕಾರಣ ಕಾಮಗಾರಿ ಮತ್ತೆ ವಿಳಂಬ ಹಾಗೂ ನೀತಿಸಂಹಿತೆ ಹಿನ್ನೆಲೆಯಲ್ಲಿ ನಮಗೆ ಮಧ್ಯಪ್ರವೇಶ ಮಾಡಲು ಸಾಧ್ಯವಾಗಿಲ್ಲ. ಈಗ ಯೋಜನೆಗೆ ವೇಗ ದೊರಕಿದೆ. 1 ತಿಂಗಳೊಳಗೆ ಉಜೊಡಿ ಅಂಡರ್ಪಾಸ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ತಾಂತ್ರಿಕ ಸಮಸ್ಯೆಗಳಿಂದಾಗಿ ತೊಕ್ಕೊಟ್ಟು ಮತ್ತು ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ಕುಂಠಿತವಾಗಿದ್ದರೂ ಈಗ ಶೇ.98 ಕೆಲಸ ಮುಗಿದಿದ್ದು, ಮುಂದಿನ ವಾರ ಪೂರ್ಣಗೊಳ್ಳಲಿದೆ ಎಂದು ಸಂಸದ ನಳಿನ್ ಹೇಳಿದರು. ಬುಧವಾರ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಜೂನ್ 10ರಂದು ಸೇತುವೆ ಲೋಕಾರ್ಪಣೆ ಆಗಲಿದೆ. ವಾಹನ ಸವಾರರು, ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…