Featured

ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆ :  ತಾಯಿ-ಮಗಳು ನೇಣಿಗೆ ಶರಣು – vishwanews24

ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆ :  ತಾಯಿ-ಮಗಳು ನೇಣಿಗೆ ಶರಣು

ಮಂಡ್ಯ : ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆಗೆ ಬೇಸತ್ತು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಮಂಡ್ಯ ಜಿಲ್ಲೆಯಲ್ಲಿ ಕೇಳಿ ಬಂದಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದ ಈ ದಾರುಣ ಘಟನೆಯಿಂದ ಇಡೀ ಗ್ರಾಮವೇ ಶೋಕದಲ್ಲಿದೆ.

ಮೃತರನ್ನು ಪ್ರಿಯಾಂಕಾ (19) ಮತ್ತು ಅವರ ತಾಯಿ ಶಕುಂತಲಾದೇವಿ (46) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಮನೆಯಲ್ಲೇ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಪಕ್ಕದ ಮನೆಯವರ ನಿರಂತರ ಕಿರುಕುಳ ಮತ್ತು ಬೆದರಿಕೆಯೇ ಕಾರಣ ಎನ್ನುವ ಆರೋಪ ಕುಟುಂಬಸ್ಥರಿಂದ ಕೇಳಿಬಂದಿದೆ.

ಶಕುಂತಲಾದೇವಿ ತಮ್ಮ ಮಗಳ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು. ಪ್ರಿಯಾಂಕಾ ಕೂಡ ಹೊಸ ಜೀವನ ಆರಂಭಿಸುವ ಕನಸಿನಲ್ಲಿದ್ದಳು. ಆದರೆ ಈ ದುರ್ಘಟನೆ ಮದುವೆ ಮನೆಯನ್ನು ಸಾವಿನ ಮನೆಗೆ ತಿರುಗಿಸಿದೆ. ಸಂಭ್ರಮದ ಮನೆಗೆ ಸೂತಕ ಆವರಿಸಿರುವುದು ಕುಟುಂಬಸ್ಥರನ್ನು ಆಘಾತಕ್ಕೆ ಒಳಪಡಿಸಿದೆ.

ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪಕ್ಕದ ಮನೆಯವರು ನಿಜಕ್ಕೂ ಬೆದರಿಕೆ ಹಾಕಿದ್ದರೇ? ಯಾವ ಕಾರಣಕ್ಕೆ ಕಿರುಕುಳ ನೀಡಲಾಗುತ್ತಿತ್ತು? ಎಂಬ ಎಲ್ಲಾ ಅಂಶಗಳನ್ನು ಪೊಲೀಸರು ತನಿಖೆ ಮೂಲಕ ಪತ್ತೆ ಹಚ್ಚಲಿದ್ದಾರೆ. ಈ ಘಟನೆ ಊರು-ಕೇರಿಗಳಲ್ಲಿ ನಡೆಯುವ ಸಣ್ಣ ಜಗಳಗಳು ಎಷ್ಟು ಭೀಕರ ಪರಿಣಾಮಕ್ಕೆ ಕಾರಣವಾಗಬಹುದು ಎಂಬುದಕ್ಕೆ ಮತ್ತೊಂದು ಕಳವಳಕಾರಿ ಉದಾಹರಣೆಯಾಗಿದೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

8 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

17 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

30 minutes ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

43 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

1 hour ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago