ಮಂಡ್ಯ : ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆಗೆ ಬೇಸತ್ತು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಮಂಡ್ಯ ಜಿಲ್ಲೆಯಲ್ಲಿ ಕೇಳಿ ಬಂದಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದ ಈ ದಾರುಣ ಘಟನೆಯಿಂದ ಇಡೀ ಗ್ರಾಮವೇ ಶೋಕದಲ್ಲಿದೆ.
ಮೃತರನ್ನು ಪ್ರಿಯಾಂಕಾ (19) ಮತ್ತು ಅವರ ತಾಯಿ ಶಕುಂತಲಾದೇವಿ (46) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಮನೆಯಲ್ಲೇ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಪಕ್ಕದ ಮನೆಯವರ ನಿರಂತರ ಕಿರುಕುಳ ಮತ್ತು ಬೆದರಿಕೆಯೇ ಕಾರಣ ಎನ್ನುವ ಆರೋಪ ಕುಟುಂಬಸ್ಥರಿಂದ ಕೇಳಿಬಂದಿದೆ.
ಶಕುಂತಲಾದೇವಿ ತಮ್ಮ ಮಗಳ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು. ಪ್ರಿಯಾಂಕಾ ಕೂಡ ಹೊಸ ಜೀವನ ಆರಂಭಿಸುವ ಕನಸಿನಲ್ಲಿದ್ದಳು. ಆದರೆ ಈ ದುರ್ಘಟನೆ ಮದುವೆ ಮನೆಯನ್ನು ಸಾವಿನ ಮನೆಗೆ ತಿರುಗಿಸಿದೆ. ಸಂಭ್ರಮದ ಮನೆಗೆ ಸೂತಕ ಆವರಿಸಿರುವುದು ಕುಟುಂಬಸ್ಥರನ್ನು ಆಘಾತಕ್ಕೆ ಒಳಪಡಿಸಿದೆ.
ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪಕ್ಕದ ಮನೆಯವರು ನಿಜಕ್ಕೂ ಬೆದರಿಕೆ ಹಾಕಿದ್ದರೇ? ಯಾವ ಕಾರಣಕ್ಕೆ ಕಿರುಕುಳ ನೀಡಲಾಗುತ್ತಿತ್ತು? ಎಂಬ ಎಲ್ಲಾ ಅಂಶಗಳನ್ನು ಪೊಲೀಸರು ತನಿಖೆ ಮೂಲಕ ಪತ್ತೆ ಹಚ್ಚಲಿದ್ದಾರೆ. ಈ ಘಟನೆ ಊರು-ಕೇರಿಗಳಲ್ಲಿ ನಡೆಯುವ ಸಣ್ಣ ಜಗಳಗಳು ಎಷ್ಟು ಭೀಕರ ಪರಿಣಾಮಕ್ಕೆ ಕಾರಣವಾಗಬಹುದು ಎಂಬುದಕ್ಕೆ ಮತ್ತೊಂದು ಕಳವಳಕಾರಿ ಉದಾಹರಣೆಯಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…