ಮಂಡ್ಯ : ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆಗೆ ಬೇಸತ್ತು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಮಂಡ್ಯ ಜಿಲ್ಲೆಯಲ್ಲಿ ಕೇಳಿ ಬಂದಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದ ಈ ದಾರುಣ ಘಟನೆಯಿಂದ ಇಡೀ ಗ್ರಾಮವೇ ಶೋಕದಲ್ಲಿದೆ.
ಮೃತರನ್ನು ಪ್ರಿಯಾಂಕಾ (19) ಮತ್ತು ಅವರ ತಾಯಿ ಶಕುಂತಲಾದೇವಿ (46) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಮನೆಯಲ್ಲೇ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಪಕ್ಕದ ಮನೆಯವರ ನಿರಂತರ ಕಿರುಕುಳ ಮತ್ತು ಬೆದರಿಕೆಯೇ ಕಾರಣ ಎನ್ನುವ ಆರೋಪ ಕುಟುಂಬಸ್ಥರಿಂದ ಕೇಳಿಬಂದಿದೆ.
ಶಕುಂತಲಾದೇವಿ ತಮ್ಮ ಮಗಳ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು. ಪ್ರಿಯಾಂಕಾ ಕೂಡ ಹೊಸ ಜೀವನ ಆರಂಭಿಸುವ ಕನಸಿನಲ್ಲಿದ್ದಳು. ಆದರೆ ಈ ದುರ್ಘಟನೆ ಮದುವೆ ಮನೆಯನ್ನು ಸಾವಿನ ಮನೆಗೆ ತಿರುಗಿಸಿದೆ. ಸಂಭ್ರಮದ ಮನೆಗೆ ಸೂತಕ ಆವರಿಸಿರುವುದು ಕುಟುಂಬಸ್ಥರನ್ನು ಆಘಾತಕ್ಕೆ ಒಳಪಡಿಸಿದೆ.
ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪಕ್ಕದ ಮನೆಯವರು ನಿಜಕ್ಕೂ ಬೆದರಿಕೆ ಹಾಕಿದ್ದರೇ? ಯಾವ ಕಾರಣಕ್ಕೆ ಕಿರುಕುಳ ನೀಡಲಾಗುತ್ತಿತ್ತು? ಎಂಬ ಎಲ್ಲಾ ಅಂಶಗಳನ್ನು ಪೊಲೀಸರು ತನಿಖೆ ಮೂಲಕ ಪತ್ತೆ ಹಚ್ಚಲಿದ್ದಾರೆ. ಈ ಘಟನೆ ಊರು-ಕೇರಿಗಳಲ್ಲಿ ನಡೆಯುವ ಸಣ್ಣ ಜಗಳಗಳು ಎಷ್ಟು ಭೀಕರ ಪರಿಣಾಮಕ್ಕೆ ಕಾರಣವಾಗಬಹುದು ಎಂಬುದಕ್ಕೆ ಮತ್ತೊಂದು ಕಳವಳಕಾರಿ ಉದಾಹರಣೆಯಾಗಿದೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…