ಬೆಂಗಳೂರು:ಆಗಸ್ಟ್ 7ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸಮಾವೇಶಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಬಹಿರಂಗ ಆಹ್ವಾನ ನೀಡಿದ್ದಾರೆ.
ಪಕ್ಷಕ್ಕೆ ನಿಷ್ಠರಾಗಿರುವ ಮತ್ತು ಜೆಡಿಎಸ್ ಪಕ್ಷವನ್ನು ಕಟ್ಟೇ ಕಟ್ಟುತ್ತೇವೆ ಎಂಬ ಹಠ ತೊಟ್ಟಿರುವ ಕಾರ್ಯಕರ್ತರೊಂದಿಗೆ ಸಮಾಲೋಚಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ತಯಾರಿಸುವ ಉದ್ದೇಶದಿಂದ ಅರಮನೆ ಮೈದಾನದಲ್ಲಿ ನಿಷ್ಠಾವಂತ ಕಾರ್ಯಕರ್ತರ ಸಮಾವೇಶ ನಡೆಸಲಾಗುತ್ತಿದೆ.
ರಾಜ್ಯದ ಜನರಿಗೆ ಪ್ರಾದೇಶಿಕ ಪಕ್ಷವೊಂದರ ಅನಿವಾರ್ಯತೆ ಅಥವಾ ಅಗತ್ಯ ಇಂದಲ್ಲ ನಾಳೆ ಅರಿವಾಗುತ್ತದೆ ಎಂಬ ವಿಶ್ವಾಸ ನಮ್ಮದು.ಅದಕ್ಕಾಗಿ ಜೆಡಿಎಸ್ ಪಕ್ಷವನ್ನು ಉಳಿಸಿ ಬೆಳೆಸಬೇಕು.ಹಿಂದೇ ಆಗಿರುವ ತಪ್ಪುಗಳನ್ನು ತಿದ್ದುಕೊಂಡು ಹೊಸ ಹೆಜ್ಜೆ ಇಡಬೇಕೆಂದು ಬಹಿರಂಗ ಆಹ್ವಾನ ಪತ್ರದಲ್ಲಿ ಗೌಡರು ತಿಳಿಸಿದ್ದಾರೆ.
ಲೋಕಸಭಾ ಸದಸ್ಯರ, ರಾಜ್ಯಸಭಾ ಸದಸ್ಯರು, ಮಾಜಿ ಸಚಿವರು, ವಿಧಾನಸಭೆ, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ಸಂಸದರು, 2018ರ ವಿಧಾನಸಭೆ ಹಾಗೂ 2019ರ ಲೋಕಸಭೆ ಚುನಾವಣೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಜಿಲ್ಲಾ ಹಾಗೂ ರಾಜ್ಯಮಟ್ಟದ ಪಕ್ಷದ ಪದಾಧಿಕಾರಿಗಳು ಸೇರಿದಂತೆ ನಿಷ್ಠಾವಂತ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…