ಬೆಂಗಳೂರು:ಆಗಸ್ಟ್ 7ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸಮಾವೇಶಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಬಹಿರಂಗ ಆಹ್ವಾನ ನೀಡಿದ್ದಾರೆ.
ಪಕ್ಷಕ್ಕೆ ನಿಷ್ಠರಾಗಿರುವ ಮತ್ತು ಜೆಡಿಎಸ್ ಪಕ್ಷವನ್ನು ಕಟ್ಟೇ ಕಟ್ಟುತ್ತೇವೆ ಎಂಬ ಹಠ ತೊಟ್ಟಿರುವ ಕಾರ್ಯಕರ್ತರೊಂದಿಗೆ ಸಮಾಲೋಚಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ತಯಾರಿಸುವ ಉದ್ದೇಶದಿಂದ ಅರಮನೆ ಮೈದಾನದಲ್ಲಿ ನಿಷ್ಠಾವಂತ ಕಾರ್ಯಕರ್ತರ ಸಮಾವೇಶ ನಡೆಸಲಾಗುತ್ತಿದೆ.
ರಾಜ್ಯದ ಜನರಿಗೆ ಪ್ರಾದೇಶಿಕ ಪಕ್ಷವೊಂದರ ಅನಿವಾರ್ಯತೆ ಅಥವಾ ಅಗತ್ಯ ಇಂದಲ್ಲ ನಾಳೆ ಅರಿವಾಗುತ್ತದೆ ಎಂಬ ವಿಶ್ವಾಸ ನಮ್ಮದು.ಅದಕ್ಕಾಗಿ ಜೆಡಿಎಸ್ ಪಕ್ಷವನ್ನು ಉಳಿಸಿ ಬೆಳೆಸಬೇಕು.ಹಿಂದೇ ಆಗಿರುವ ತಪ್ಪುಗಳನ್ನು ತಿದ್ದುಕೊಂಡು ಹೊಸ ಹೆಜ್ಜೆ ಇಡಬೇಕೆಂದು ಬಹಿರಂಗ ಆಹ್ವಾನ ಪತ್ರದಲ್ಲಿ ಗೌಡರು ತಿಳಿಸಿದ್ದಾರೆ.
ಲೋಕಸಭಾ ಸದಸ್ಯರ, ರಾಜ್ಯಸಭಾ ಸದಸ್ಯರು, ಮಾಜಿ ಸಚಿವರು, ವಿಧಾನಸಭೆ, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ಸಂಸದರು, 2018ರ ವಿಧಾನಸಭೆ ಹಾಗೂ 2019ರ ಲೋಕಸಭೆ ಚುನಾವಣೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಜಿಲ್ಲಾ ಹಾಗೂ ರಾಜ್ಯಮಟ್ಟದ ಪಕ್ಷದ ಪದಾಧಿಕಾರಿಗಳು ಸೇರಿದಂತೆ ನಿಷ್ಠಾವಂತ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…