ಬೆಂಗಳೂರು:ಪಕ್ಷದೊಳಗೆ ಇದ್ದುಕೊಂಡು ಪಕ್ಷಕ್ಕೆ ಮತ್ತು ಪಕ್ಷದ ಸಿದ್ಧಾಂತಕ್ಕೆ ಹಾನಿ ಎಸಗುವ ಬದಲು ಅಂತವರು ಪಕ್ಷ ಬಿಟ್ಟು ಹೋಗಲಿ ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.
ಯುಪಿಎ- 2 ಸರಕಾರದ ನೀತಿ ಮತ್ತು ಯೋಜನೆಗಳು ಅಸ್ತವ್ಯಸ್ತ ಆಗಲು ಮತ್ತು ಹಲವಾರು ಬಾರಿ ಪಕ್ಷವು ತನ್ನ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳಲು ಜೈರಾಂ ರಮೇಶ್ ಕಾರಣ ಎಂದು ಹೇಳಿದರು.
ಜೊತೆಗೆ ಶಶಿ ತರೂರ್ ಅವರನ್ನೂ ತರಾಟೆಗೆತ್ತಿಕೊಂಡಿರುವ ಮೊಯ್ಲಿ, ಪ್ರಧಾನಿ ಮೋದಿಯನ್ನು ಶ್ಲಾಘಿಸುವ ಮೂಲಕ ವಿಪಕ್ಷಗಳು ಪ್ರಧಾನಿ ವಿರುದ್ಧ ಮಾಡುತ್ತಿರುವ ಟೀಕೆಯ ವಿಶ್ವಾಸಾರ್ಹತೆಯನ್ನು ತರೂರ್ ಕುಂದಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಈ ಇಬ್ಬರು ನಾಯಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಮೊಯ್ಲಿ ಆಗ್ರಹಿಸಿದ್ದಾರೆ.
ಈ ರೀತಿಯ ಹೇಳಿಕೆ ನೀಡುವ ಯಾವ ಮುಖಂಡರೂ ಕಾಂಗ್ರೆಸ್ ಪಕ್ಷ ಅಥವಾ ಅದರ ನಾಯಕತ್ವಕ್ಕೆ ಸೇವೆ ಸಲ್ಲಿಸುತ್ತಿಲ್ಲ ಎಂಬ ಭಾವನೆ ಮೂಡುತ್ತಿದೆ . ಯಾಕೆಂದರೆ ಸಚಿವರಾಗಿ ಪ್ರತಿನಿಧಿಸಿದ್ದವರು ವಿಪಕ್ಷದಲ್ಲಿ ಕುಳಿತುಕೊಳ್ಳುವಾಗ ಆಡಳಿತ ಪಕ್ಷದೊಂದಿಗೆ ಅಂತರ ಕಾಯ್ದುಕೊಳ್ಳಬೇಕು ಎಂದು ಮೊಯ್ಲಿ ಹೇಳಿದರು.
ಶಶಿ ತರೂರ್ ಓರ್ವ ಪ್ರಬುದ್ಧ ರಾಜಕಾರಣಿ ಎಂದು ಯಾವತ್ತೂ ಪರಿಗಣಿಸಿಲ್ಲ. ಆಗಿಂದಾಗ್ಗೆ ಪ್ರಚಾರದಲ್ಲಿ ಇರಲು ಏನಾದರೊಂದು ಹೇಳುತ್ತಿರುತ್ತಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವೇ ಇಲ್ಲ. ಅವರೊಬ್ಬ ಪ್ರಬುದ್ಧ ರಾಜಕಾರಣಿಯಾಗಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು.
ಇಂತಹ ಜನರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಇದು ಸಕಾಲ. ಪಕ್ಷದೊಳಗೆ ಇದ್ದುಕೊಂಡು ಪಕ್ಷಕ್ಕೆ ಮತ್ತು ಪಕ್ಷದ ಸಿದ್ಧಾಂತಕ್ಕೆ ಹಾನಿ ಎಸಗುವ ಬದಲು ಅಂತವರು ಪಕ್ಷ ಬಿಟ್ಟು ಹೋಗಲಿ ಎಂದು ಮೊಯ್ಲಿ ಹೇಳಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…