ಬೆಂಗಳೂರು:ಪಕ್ಷದೊಳಗೆ ಇದ್ದುಕೊಂಡು ಪಕ್ಷಕ್ಕೆ ಮತ್ತು ಪಕ್ಷದ ಸಿದ್ಧಾಂತಕ್ಕೆ ಹಾನಿ ಎಸಗುವ ಬದಲು ಅಂತವರು ಪಕ್ಷ ಬಿಟ್ಟು ಹೋಗಲಿ ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.
ಯುಪಿಎ- 2 ಸರಕಾರದ ನೀತಿ ಮತ್ತು ಯೋಜನೆಗಳು ಅಸ್ತವ್ಯಸ್ತ ಆಗಲು ಮತ್ತು ಹಲವಾರು ಬಾರಿ ಪಕ್ಷವು ತನ್ನ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳಲು ಜೈರಾಂ ರಮೇಶ್ ಕಾರಣ ಎಂದು ಹೇಳಿದರು.
ಜೊತೆಗೆ ಶಶಿ ತರೂರ್ ಅವರನ್ನೂ ತರಾಟೆಗೆತ್ತಿಕೊಂಡಿರುವ ಮೊಯ್ಲಿ, ಪ್ರಧಾನಿ ಮೋದಿಯನ್ನು ಶ್ಲಾಘಿಸುವ ಮೂಲಕ ವಿಪಕ್ಷಗಳು ಪ್ರಧಾನಿ ವಿರುದ್ಧ ಮಾಡುತ್ತಿರುವ ಟೀಕೆಯ ವಿಶ್ವಾಸಾರ್ಹತೆಯನ್ನು ತರೂರ್ ಕುಂದಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಈ ಇಬ್ಬರು ನಾಯಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಮೊಯ್ಲಿ ಆಗ್ರಹಿಸಿದ್ದಾರೆ.
ಈ ರೀತಿಯ ಹೇಳಿಕೆ ನೀಡುವ ಯಾವ ಮುಖಂಡರೂ ಕಾಂಗ್ರೆಸ್ ಪಕ್ಷ ಅಥವಾ ಅದರ ನಾಯಕತ್ವಕ್ಕೆ ಸೇವೆ ಸಲ್ಲಿಸುತ್ತಿಲ್ಲ ಎಂಬ ಭಾವನೆ ಮೂಡುತ್ತಿದೆ . ಯಾಕೆಂದರೆ ಸಚಿವರಾಗಿ ಪ್ರತಿನಿಧಿಸಿದ್ದವರು ವಿಪಕ್ಷದಲ್ಲಿ ಕುಳಿತುಕೊಳ್ಳುವಾಗ ಆಡಳಿತ ಪಕ್ಷದೊಂದಿಗೆ ಅಂತರ ಕಾಯ್ದುಕೊಳ್ಳಬೇಕು ಎಂದು ಮೊಯ್ಲಿ ಹೇಳಿದರು.
ಶಶಿ ತರೂರ್ ಓರ್ವ ಪ್ರಬುದ್ಧ ರಾಜಕಾರಣಿ ಎಂದು ಯಾವತ್ತೂ ಪರಿಗಣಿಸಿಲ್ಲ. ಆಗಿಂದಾಗ್ಗೆ ಪ್ರಚಾರದಲ್ಲಿ ಇರಲು ಏನಾದರೊಂದು ಹೇಳುತ್ತಿರುತ್ತಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವೇ ಇಲ್ಲ. ಅವರೊಬ್ಬ ಪ್ರಬುದ್ಧ ರಾಜಕಾರಣಿಯಾಗಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು.
ಇಂತಹ ಜನರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಇದು ಸಕಾಲ. ಪಕ್ಷದೊಳಗೆ ಇದ್ದುಕೊಂಡು ಪಕ್ಷಕ್ಕೆ ಮತ್ತು ಪಕ್ಷದ ಸಿದ್ಧಾಂತಕ್ಕೆ ಹಾನಿ ಎಸಗುವ ಬದಲು ಅಂತವರು ಪಕ್ಷ ಬಿಟ್ಟು ಹೋಗಲಿ ಎಂದು ಮೊಯ್ಲಿ ಹೇಳಿದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…