Featured

ಪಕ್ಷದೊಳಗೆ ಇದ್ದುಕೊಂಡು ಪಕ್ಷಕ್ಕೆ ಮತ್ತು ಪಕ್ಷದ ಸಿದ್ಧಾಂತಕ್ಕೆ ಹಾನಿ ಮಾಡುವ ಬದಲು ಪಕ್ಷ ಬಿಟ್ಟು ಹೋಗಲಿ : ವೀರಪ್ಪ ಮೊಯ್ಲಿ -Vishwanews24

ಬೆಂಗಳೂರು:ಪಕ್ಷದೊಳಗೆ ಇದ್ದುಕೊಂಡು ಪಕ್ಷಕ್ಕೆ ಮತ್ತು ಪಕ್ಷದ ಸಿದ್ಧಾಂತಕ್ಕೆ ಹಾನಿ ಎಸಗುವ ಬದಲು ಅಂತವರು ಪಕ್ಷ ಬಿಟ್ಟು ಹೋಗಲಿ ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.

ಯುಪಿಎ- 2 ಸರಕಾರದ ನೀತಿ ಮತ್ತು ಯೋಜನೆಗಳು ಅಸ್ತವ್ಯಸ್ತ ಆಗಲು ಮತ್ತು ಹಲವಾರು ಬಾರಿ ಪಕ್ಷವು ತನ್ನ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳಲು ಜೈರಾಂ ರಮೇಶ್ ಕಾರಣ ಎಂದು ಹೇಳಿದರು.

ಜೊತೆಗೆ ಶಶಿ ತರೂರ್ ಅವರನ್ನೂ ತರಾಟೆಗೆತ್ತಿಕೊಂಡಿರುವ ಮೊಯ್ಲಿ, ಪ್ರಧಾನಿ ಮೋದಿಯನ್ನು ಶ್ಲಾಘಿಸುವ ಮೂಲಕ ವಿಪಕ್ಷಗಳು ಪ್ರಧಾನಿ ವಿರುದ್ಧ ಮಾಡುತ್ತಿರುವ ಟೀಕೆಯ ವಿಶ್ವಾಸಾರ್ಹತೆಯನ್ನು ತರೂರ್ ಕುಂದಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಈ ಇಬ್ಬರು ನಾಯಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಮೊಯ್ಲಿ ಆಗ್ರಹಿಸಿದ್ದಾರೆ.

ಈ ರೀತಿಯ ಹೇಳಿಕೆ ನೀಡುವ ಯಾವ ಮುಖಂಡರೂ ಕಾಂಗ್ರೆಸ್ ಪಕ್ಷ ಅಥವಾ ಅದರ ನಾಯಕತ್ವಕ್ಕೆ ಸೇವೆ ಸಲ್ಲಿಸುತ್ತಿಲ್ಲ ಎಂಬ ಭಾವನೆ ಮೂಡುತ್ತಿದೆ . ಯಾಕೆಂದರೆ ಸಚಿವರಾಗಿ ಪ್ರತಿನಿಧಿಸಿದ್ದವರು ವಿಪಕ್ಷದಲ್ಲಿ ಕುಳಿತುಕೊಳ್ಳುವಾಗ ಆಡಳಿತ ಪಕ್ಷದೊಂದಿಗೆ ಅಂತರ ಕಾಯ್ದುಕೊಳ್ಳಬೇಕು ಎಂದು ಮೊಯ್ಲಿ ಹೇಳಿದರು.

ಶಶಿ ತರೂರ್ ಓರ್ವ ಪ್ರಬುದ್ಧ ರಾಜಕಾರಣಿ ಎಂದು ಯಾವತ್ತೂ ಪರಿಗಣಿಸಿಲ್ಲ. ಆಗಿಂದಾಗ್ಗೆ ಪ್ರಚಾರದಲ್ಲಿ ಇರಲು ಏನಾದರೊಂದು ಹೇಳುತ್ತಿರುತ್ತಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವೇ ಇಲ್ಲ. ಅವರೊಬ್ಬ ಪ್ರಬುದ್ಧ ರಾಜಕಾರಣಿಯಾಗಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು.

ಇಂತಹ ಜನರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಇದು ಸಕಾಲ. ಪಕ್ಷದೊಳಗೆ ಇದ್ದುಕೊಂಡು ಪಕ್ಷಕ್ಕೆ ಮತ್ತು ಪಕ್ಷದ ಸಿದ್ಧಾಂತಕ್ಕೆ ಹಾನಿ ಎಸಗುವ ಬದಲು ಅಂತವರು ಪಕ್ಷ ಬಿಟ್ಟು ಹೋಗಲಿ ಎಂದು ಮೊಯ್ಲಿ ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago