ವಯನಾಡ್, : ವಾರಾಣಸಿಯಿಂದ ಸ್ಪರ್ಧಿಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅನುಮತಿ ನೀಡಿದರೆ ತಾವು ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಸಂತಸದಿಂದ ಸ್ಪರ್ಧಿಸುವುದಾಗಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷರು ನನಗೆ ವಾರಣಾಸಿಯಿಂದ ಸ್ಪರ್ಧಿಸಲು ಹೇಳಿದರೆ ನಾನು ಸಂತಸದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದರು.
ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ಮೋದಿ ದೇಶವನ್ನು ವಿಭಜಿಸಿದ್ದಾರೆ. ಅವರು ಕೇವಲ ಶ್ರೀಮಂತರ ಹಿತವನ್ನು ರಕ್ಷಿಸಿ ದೇಶದ ಅತಿ ದೊಡ್ಡ ಸಮುದಾಯವಾಗಿರುವ ರೈತರನ್ನು ಕಡೆಗಣಿಸಿದ್ದಾರೆ. ಬಿಜೆಪಿ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿತ್ತು. ಪ್ರತಿಯೊಬ್ಬ ವ್ಯಕ್ತಿಯ ಖಾತೆಗೆ 15 ಲಕ್ಷ ರೂಗಳನ್ನು ಹಾಕುವುದಾಗಿ ಆಶ್ವಾಸನೆ ನೀಡಿತ್ತು. ಆದರೆ ಅದನ್ನು ಮಾಡಿಲ್ಲ ಎಂದು ಹೇಳಿದರು.
ರಾಹುಲ್ ಗಾಂಧಿಯವರಿಗೆ ಸತ್ಯ ಮತ್ತು ನ್ಯಾಯ ಮಹತ್ವದ್ದಾಗಿರುತ್ತದೆ. ಮೋದಿ ಸರ್ಕಾರವು ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಅವುಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…