ಬೆಂಗಳೂರು; ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಒಟ್ಟಿಗೆ ಇದ್ದೇವೆ ಹಾಗೂ ಬಹುಮತ ಸಾಬೀತುಪಡಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಹುಮತ ಸಾಬೀತುಪಡಿಸುವ ಕುರಿತು ಇಂದು ವಿಧಾನಸೌಧದಲ್ಲಿ ಮಾತನಾಡಿದ ಜಿ. ಪರಮೇಶ್ವರ್, “ನಾವು ಎಲ್ಲಾ ಶಾಸಕರು ಒಟ್ಟಿಗೆ ಇದ್ದೇವೆ, ವಿಧಾನಸೌಧಕ್ಕೂ ಒಟ್ಟಿಗೆ ಬಂದಿದ್ದೇವೆ. ವಿಶ್ವಾಸಮತಕ್ಕೆ ಯಾವುದೇ ಅಡಚಣೆ ಬರುವುದಿಲ್ಲ. ಬಹುಮತ ಸಾಬೀತಿಗೂ ಮುನ್ನ ಸ್ಪೀಕರ್ ರಮೇಶ್ ಕುಮಾರ್ ಚರ್ಚೆಗೆ ಅವಕಾಶ ಕೊಟ್ಟರೆ, ಮುಖ್ಯಮಂತ್ರಿ ಕುಮಾರಸ್ವಾಮಿ ಚರ್ಚೆ ಮಾಡಬಹುದು. ಒಟ್ಟಾರೆ ಮೈತ್ರಿ ಸರ್ಕಾರ ಬಹುಮತ ಸಾಬೀತುಪಡಿಸುವುದು ಮಾತ್ರ ಖಚಿತ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸದನದಲ್ಲಿ ಬಹುಮತದ ಮೇಲೆ ನಡೆಯ ಬಹುದಾದ ಚರ್ಚೆಯ ಕುರಿತು ಮಾಹಿತಿ ನೀಡಿದ ಅವರು, “ಸರ್ಕಾರದ ಬಗ್ಗೆ, ವ್ಯವಸ್ಥೆಯ ಬಗ್ಗೆ, ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ” ಎಂದು ತಿಳಿಸಿದರು. ಅಲ್ಲದೆ ಸದನದ ನಂತರ ಶಾಸಕರ ರೆಸಾರ್ಟ್ ವಾಸ್ತವ್ಯ ಇರತ್ತೋ? ಇಲ್ವೋ? ಅಂತ ಎಲ್ಲಾ ನಾಯಕರು ಒಟ್ಟಾಗಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…