ಬೆಂಗಳೂರು; ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಒಟ್ಟಿಗೆ ಇದ್ದೇವೆ ಹಾಗೂ ಬಹುಮತ ಸಾಬೀತುಪಡಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಹುಮತ ಸಾಬೀತುಪಡಿಸುವ ಕುರಿತು ಇಂದು ವಿಧಾನಸೌಧದಲ್ಲಿ ಮಾತನಾಡಿದ ಜಿ. ಪರಮೇಶ್ವರ್, “ನಾವು ಎಲ್ಲಾ ಶಾಸಕರು ಒಟ್ಟಿಗೆ ಇದ್ದೇವೆ, ವಿಧಾನಸೌಧಕ್ಕೂ ಒಟ್ಟಿಗೆ ಬಂದಿದ್ದೇವೆ. ವಿಶ್ವಾಸಮತಕ್ಕೆ ಯಾವುದೇ ಅಡಚಣೆ ಬರುವುದಿಲ್ಲ. ಬಹುಮತ ಸಾಬೀತಿಗೂ ಮುನ್ನ ಸ್ಪೀಕರ್ ರಮೇಶ್ ಕುಮಾರ್ ಚರ್ಚೆಗೆ ಅವಕಾಶ ಕೊಟ್ಟರೆ, ಮುಖ್ಯಮಂತ್ರಿ ಕುಮಾರಸ್ವಾಮಿ ಚರ್ಚೆ ಮಾಡಬಹುದು. ಒಟ್ಟಾರೆ ಮೈತ್ರಿ ಸರ್ಕಾರ ಬಹುಮತ ಸಾಬೀತುಪಡಿಸುವುದು ಮಾತ್ರ ಖಚಿತ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸದನದಲ್ಲಿ ಬಹುಮತದ ಮೇಲೆ ನಡೆಯ ಬಹುದಾದ ಚರ್ಚೆಯ ಕುರಿತು ಮಾಹಿತಿ ನೀಡಿದ ಅವರು, “ಸರ್ಕಾರದ ಬಗ್ಗೆ, ವ್ಯವಸ್ಥೆಯ ಬಗ್ಗೆ, ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ” ಎಂದು ತಿಳಿಸಿದರು. ಅಲ್ಲದೆ ಸದನದ ನಂತರ ಶಾಸಕರ ರೆಸಾರ್ಟ್ ವಾಸ್ತವ್ಯ ಇರತ್ತೋ? ಇಲ್ವೋ? ಅಂತ ಎಲ್ಲಾ ನಾಯಕರು ಒಟ್ಟಾಗಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…