ಹೊಸಪೇಟೆ: ಬಳ್ಳಾರಿ ಸೇರಿದಂತೆ ಪ್ರತಿ ತಾಲೂಕಿನಲ್ಲಿ ಪಕ್ಷದ ಕಚೇರಿ ಸ್ಥಾಪನೆಗೆ ಭಿಕ್ಷೆ ಎತ್ತಲು ಕೂಡ ಸಿದ್ಧನಾಗಿರುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.
ನಗರದ ಸಾಯಿಲೀಲಾ ಕಲ್ಯಾಣ ಮಂಟಪದಲ್ಲಿ ನಡೆದ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸ್ವಂತ ಕಚೇರಿ ಹೊಂದಬೇಕು. ಇದಕ್ಕಾಗಿ ದೇಣಿಗೆ ಸಂಗ್ರಹಿಸೋಣ. ಪಕ್ಷಕ್ಕಾಗಿ ಕಾರ್ಯಕರ್ತರಿಂದ ಇಟ್ಟಿಗೆ, ಸಿಮೆಂಟ್, ಐವತ್ತು, ನೂರು ರು. ಸಂಗ್ರಹಿಸೋಣ ಎಂದರು.
ಈ ವೇಳೆ ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಇಮಾಮ್ ನಿಯಾಜಿ ಅವರು, ಹೊಸಪೇಟೆಯಲ್ಲಿ 60/40 ಸೈಟ್ ದಾನವಾಗಿ ನೀಡುವೆ ಎಂದು ಅಧ್ಯಕ್ಷರಿಗೆ ತಿಳಿಸಿದರು. ಕೂಡಲೇ ಡಿ.ಕೆ. ಶಿವಕುಮಾರ ಅವರು ತಮ್ಮ ಹೆಗಲ ಮೇಲಿದ್ದ ಶಾಲು ಇಮಾಮ್ ಅವರಿಗೆ ಹೊದಿಸಿ ಶಹಬ್ಬಾಸ್ಗಿರಿ ನೀಡಿದರು.
ಶಾಸಕರಾದ ಪಿ.ಟಿ. ಪರಮೇಶ್ವರ ನಾಯ್ಕ, ಈ. ತುಕಾರಾಂ, ಬಿ. ನಾಗೇಂದ್ರ, ಭೀಮಾನಾಯ್ಕ, ಜೆ.ಎನ್. ಗಣೇಶ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಮಾಜಿ ಸಚಿವ ಸಂತೋಷ್ ಲಾಡ್, ಮಾಜಿ ಶಾಸಕರಾದ ಅನಿಲ್ ಲಾಡ್, ಸಿರಾಜ್ ಶೇಕ್, ರಾಜ್ಯಸಭೆ ಸದಸ್ಯ ಸೈಯದ್ ನಾಸೀರ್ ಹುಸೇನ್, ಬಳ್ಳಾರಿ ಜಿಲ್ಲಾಧ್ಯಕ್ಷ ಮಹಮ್ಮದ್ ರಫೀಕ್, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶಿವಯೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಮಾಮ್ ನಿಯಾಜಿ, ವಿ. ಸೋಮು, ಮುಖಂಡರಾದ ವೆಂಕಟರಾವ್ ಘೋರ್ಪಡೆ, ದೀಪಕ್ ಸಿಂಗ್, ಭರತ್ ರೆಡ್ಡಿ, ಗುಜ್ಜಲ ನಾಗರಾಜ್, ಗುಜ್ಜಲ ರಘು ಮತ್ತಿತರರಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…