ಹೊಸಪೇಟೆ: ಬಳ್ಳಾರಿ ಸೇರಿದಂತೆ ಪ್ರತಿ ತಾಲೂಕಿನಲ್ಲಿ ಪಕ್ಷದ ಕಚೇರಿ ಸ್ಥಾಪನೆಗೆ ಭಿಕ್ಷೆ ಎತ್ತಲು ಕೂಡ ಸಿದ್ಧನಾಗಿರುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.
ನಗರದ ಸಾಯಿಲೀಲಾ ಕಲ್ಯಾಣ ಮಂಟಪದಲ್ಲಿ ನಡೆದ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸ್ವಂತ ಕಚೇರಿ ಹೊಂದಬೇಕು. ಇದಕ್ಕಾಗಿ ದೇಣಿಗೆ ಸಂಗ್ರಹಿಸೋಣ. ಪಕ್ಷಕ್ಕಾಗಿ ಕಾರ್ಯಕರ್ತರಿಂದ ಇಟ್ಟಿಗೆ, ಸಿಮೆಂಟ್, ಐವತ್ತು, ನೂರು ರು. ಸಂಗ್ರಹಿಸೋಣ ಎಂದರು.
ಈ ವೇಳೆ ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಇಮಾಮ್ ನಿಯಾಜಿ ಅವರು, ಹೊಸಪೇಟೆಯಲ್ಲಿ 60/40 ಸೈಟ್ ದಾನವಾಗಿ ನೀಡುವೆ ಎಂದು ಅಧ್ಯಕ್ಷರಿಗೆ ತಿಳಿಸಿದರು. ಕೂಡಲೇ ಡಿ.ಕೆ. ಶಿವಕುಮಾರ ಅವರು ತಮ್ಮ ಹೆಗಲ ಮೇಲಿದ್ದ ಶಾಲು ಇಮಾಮ್ ಅವರಿಗೆ ಹೊದಿಸಿ ಶಹಬ್ಬಾಸ್ಗಿರಿ ನೀಡಿದರು.
ಶಾಸಕರಾದ ಪಿ.ಟಿ. ಪರಮೇಶ್ವರ ನಾಯ್ಕ, ಈ. ತುಕಾರಾಂ, ಬಿ. ನಾಗೇಂದ್ರ, ಭೀಮಾನಾಯ್ಕ, ಜೆ.ಎನ್. ಗಣೇಶ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಮಾಜಿ ಸಚಿವ ಸಂತೋಷ್ ಲಾಡ್, ಮಾಜಿ ಶಾಸಕರಾದ ಅನಿಲ್ ಲಾಡ್, ಸಿರಾಜ್ ಶೇಕ್, ರಾಜ್ಯಸಭೆ ಸದಸ್ಯ ಸೈಯದ್ ನಾಸೀರ್ ಹುಸೇನ್, ಬಳ್ಳಾರಿ ಜಿಲ್ಲಾಧ್ಯಕ್ಷ ಮಹಮ್ಮದ್ ರಫೀಕ್, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶಿವಯೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಮಾಮ್ ನಿಯಾಜಿ, ವಿ. ಸೋಮು, ಮುಖಂಡರಾದ ವೆಂಕಟರಾವ್ ಘೋರ್ಪಡೆ, ದೀಪಕ್ ಸಿಂಗ್, ಭರತ್ ರೆಡ್ಡಿ, ಗುಜ್ಜಲ ನಾಗರಾಜ್, ಗುಜ್ಜಲ ರಘು ಮತ್ತಿತರರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…