ಹೊಸಪೇಟೆ: ಬಳ್ಳಾರಿ ಸೇರಿದಂತೆ ಪ್ರತಿ ತಾಲೂಕಿನಲ್ಲಿ ಪಕ್ಷದ ಕಚೇರಿ ಸ್ಥಾಪನೆಗೆ ಭಿಕ್ಷೆ ಎತ್ತಲು ಕೂಡ ಸಿದ್ಧನಾಗಿರುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.
ನಗರದ ಸಾಯಿಲೀಲಾ ಕಲ್ಯಾಣ ಮಂಟಪದಲ್ಲಿ ನಡೆದ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸ್ವಂತ ಕಚೇರಿ ಹೊಂದಬೇಕು. ಇದಕ್ಕಾಗಿ ದೇಣಿಗೆ ಸಂಗ್ರಹಿಸೋಣ. ಪಕ್ಷಕ್ಕಾಗಿ ಕಾರ್ಯಕರ್ತರಿಂದ ಇಟ್ಟಿಗೆ, ಸಿಮೆಂಟ್, ಐವತ್ತು, ನೂರು ರು. ಸಂಗ್ರಹಿಸೋಣ ಎಂದರು.
ಈ ವೇಳೆ ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಇಮಾಮ್ ನಿಯಾಜಿ ಅವರು, ಹೊಸಪೇಟೆಯಲ್ಲಿ 60/40 ಸೈಟ್ ದಾನವಾಗಿ ನೀಡುವೆ ಎಂದು ಅಧ್ಯಕ್ಷರಿಗೆ ತಿಳಿಸಿದರು. ಕೂಡಲೇ ಡಿ.ಕೆ. ಶಿವಕುಮಾರ ಅವರು ತಮ್ಮ ಹೆಗಲ ಮೇಲಿದ್ದ ಶಾಲು ಇಮಾಮ್ ಅವರಿಗೆ ಹೊದಿಸಿ ಶಹಬ್ಬಾಸ್ಗಿರಿ ನೀಡಿದರು.
ಶಾಸಕರಾದ ಪಿ.ಟಿ. ಪರಮೇಶ್ವರ ನಾಯ್ಕ, ಈ. ತುಕಾರಾಂ, ಬಿ. ನಾಗೇಂದ್ರ, ಭೀಮಾನಾಯ್ಕ, ಜೆ.ಎನ್. ಗಣೇಶ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಮಾಜಿ ಸಚಿವ ಸಂತೋಷ್ ಲಾಡ್, ಮಾಜಿ ಶಾಸಕರಾದ ಅನಿಲ್ ಲಾಡ್, ಸಿರಾಜ್ ಶೇಕ್, ರಾಜ್ಯಸಭೆ ಸದಸ್ಯ ಸೈಯದ್ ನಾಸೀರ್ ಹುಸೇನ್, ಬಳ್ಳಾರಿ ಜಿಲ್ಲಾಧ್ಯಕ್ಷ ಮಹಮ್ಮದ್ ರಫೀಕ್, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶಿವಯೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಮಾಮ್ ನಿಯಾಜಿ, ವಿ. ಸೋಮು, ಮುಖಂಡರಾದ ವೆಂಕಟರಾವ್ ಘೋರ್ಪಡೆ, ದೀಪಕ್ ಸಿಂಗ್, ಭರತ್ ರೆಡ್ಡಿ, ಗುಜ್ಜಲ ನಾಗರಾಜ್, ಗುಜ್ಜಲ ರಘು ಮತ್ತಿತರರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…