Featured

ಪಕ್ಷದ ಕಾರ್ಯಕರ್ತರಿಗೆ ರಕ್ಷಣೆ ನೀಡದ ಬಿಜೆಪಿ ಸರಕಾರ ಸಾಮಾನ್ಯರಿಗೆ ನೀಡಿತೇ? – ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್

4 ವರ್ಷಗಳಿಂದ ಬಿಜೆಪಿ ಕಾರ್ಯಕರ್ತರು ಸಹಿತ ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೊಲೆ : ಪಕ್ಷದ ಕಾರ್ಯಕರ್ತರಿಗೆ ರಕ್ಷಣೆ ನೀಡದ ಬಿಜೆಪಿ ಸರಕಾರ ಸಾಮಾನ್ಯರಿಗೆ ನೀಡಿತೇ? – ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್

ಉಡುಪಿ: ದಕ, ಉಡುಪಿ ಜಿಲ್ಲೆಗಳಲ್ಲಿ ಕಳೆದ 4 ವರ್ಷಗಳಿಂದ ಬಿಜೆಪಿ ಕಾರ್ಯಕರ್ತರು ಸಹಿತ ಹಿಂದೂ ಸಂಘಟನೆಗಳ ಕಾರ್ಯಕರ್ತರ, ಇತರ ಧರ್ಮದ ಅಮಾಯಕ ಜೀವಗಳು ಕೊಲೆಯಾಗುತ್ತಿರುವುದು ಆಡಳಿತಾರೂಡ ಬಿಜೆಪಿ ಸರಕಾರದಲ್ಲಿ ಸ್ವತಃ ಕಾರ್ಯಕರ್ತರಿಗೆ ರಕ್ಷಣೆ ನೀಡಲು ಸಾಧ್ಯವಾಗದವರು ಇತರರನ್ನು ಹೇಗೆ ರಕ್ಷಣೆ ಮಾಡುತ್ತಾರೆ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಅಮಾನವೀಯವಾಗಿ ಕಡಿದು ಕೊಲೆ ಮಾಡಿರುವುದು ಖಂಡನೀಯ. ತಿಂಗಳಿಗೆ ಎರಡರಂತೆ ಕೊಲೆಯಾಗುತ್ತಿರುವುದು ರಾಜ್ಯದ ಗೃಹ ಇಲಾಖೆಯ ವೈಫಲ್ಯ ಎತ್ತಿ ತೋರಿಸುತ್ತದೆ. ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರದಲ್ಲಿ ಇಂದು ಹಿಂದೂಗಳಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಲೆ ಮಾಡಿದವರು ಯಾವುದೇ ಧರ್ಮಕ್ಕೆ ಸೇರಿದ್ದರೂ ಸಹ ಅವರ ವಿರುದ್ದ ನಿರ್ದಾಕ್ಷಿಣ್ಯವಾದ ಕ್ರಮ ಕೈಗೊಳ್ಳಲು ಇದುವರೆಗೂ ಸರಕಾರ ವಿಫಲವಾಗಿದೆ.

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಕೊಲೆಯಾದ ಬಳಿಕ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ದೊಡ್ಡ ಮಟ್ಟದಲ್ಲಿ ಪ್ರಚಾರ ಪಡೆದಕೊಂಡ ಬಿಜೆಪಿ ಸರಕಾರ ಅದೇ ಆರೋಪಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡುವ ವೀಡಿಯೋ ಬಂದಾಗ ಅಂತಹ ಜೈಲಿನ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲು ಸಹ ಮೀನ ಮೇಷ ಎಣಿಸುತ್ತಿದೆ.

ಈ ಹಿಂದೆ ಭಟ್ಕಳದಲ್ಲಿ ಪರೇಶ್ ಮೇಶ್ತ ಎಂಬ ಅಮಾಯಕ ಯುವಕ ಕೊಲೆಯಾದಾಗ ಅದನ್ನೇ ಚುನಾವಣಾ ವಿಷಯವನ್ನಾಗಿ ಹೆಣದ ಮೇಲೆ ರಾಜಕೀಯ ಮಾಡಿದ ಬಿಜೆಪಿಗರಿಗೆ ಇಂದಿಗೂ ಸಹ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳುವ ಕೆಲಸ ನಡೆದಿಲ್ಲ.

ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದ್ದಾಗ ಹಿಂದೂಗಳ ಕೊಲೆಯಾಗುತ್ತಿದೆ, ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದೆಲ್ಲಾ ಬೊಬ್ಬಿಡುತ್ತಿದ್ದ ಬಿಜೆಪಿಗರು ಈಗೇಕೆ ಮೌನವಾಗಿದ್ದಾರೆ. ಬಿಜೆಪಿ ಸರಕಾರದಲ್ಲಿ ಇದುವರೆಗೆ ಕೊಲೆಯಾದ ಜೀವಗಳಿಗೆ ಬೆಲೆ ಇಲ್ಲವೇ? ಅಥವಾ ಚುನಾವಣೆ ಹತ್ತಿರ ಬರುವಾಗ ಹೆಣ ರಾಜಕೀಯ ಮಾಡಿ ಓಟು ಗಳಿಸುವ ತಂತ್ರ ಬಿಜೆಪಿ ಹೊಂದಿದೆಯೇ?

ರಾಜ್ಯದಲ್ಲಿ ಒರ್ವ ವಿಫಲ ಗೃಹಮಂತ್ರಿಯನ್ನು ಹೊಂದಿದ್ದು ಅವರಿಂದ ಕೊಲೆಗಡುಕರ ವಿರುದ್ದ ಯಾವುದೇ ರೀತಿಯ ಕಠಿಣ ಕ್ರಮ ನಿರೀಕ್ಷಿಸುವುದು ಸಾಧ‍್ಯವಿಲ್ಲ ಅವರು ಕೇವಲ ಹೇಳಿಕೆ ನೀಡುವುದು ಬಿಟ್ಟರೆ ಇದುವರೆಗೆ ಅವರಿಂದ ಯಾವುದೇ ರೀತಿಯ ಕಠಿಣ ಕ್ರಮ ನಡೆದಿರುವುದು ಕಂಡುಬಂದಿಲ್ಲ. ಇಂತಹ ಲಜ್ಜೇಗೇಡಿ ಸರಕಾರದ ವಿರುದ್ದ ಮುಂದಿನ ದಿನಗಳಲ್ಲಿ ಜನರು ದಂಗೆ ಏಳುವುದು ಖಂಡಿತ.

ಪ್ರವೀಣ್ ನೆಟ್ಟಾರು ಕೊಲೆಗೆ ಕಾರಣರಾದ ಹಾಗೂ ಇದುವರೆಗೆ ರಾಜ್ಯದಲ್ಲಿ ಕೊಲೆಯಾದ ಅಮಾಯಕ ಹಿಂದೂ ಮತ್ತು ಮುಸ್ಲಿಂರ ಸಾವಿಗೆ ನ್ಯಾಯ ದೊರಕಿಸುವ ಕೆಲಸ ರಾಜ್ಯ ಸರಕಾರ ಕೂಡಲೇ ಮಾಡಬೇಕು. ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಯನ್ನು ನೀಡುವ ಕೆಲಸ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago