ರಾಮನಗರ: ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್ಗಳು, ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ ಎಂದು ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸುವ ವಿಚಾರದ ಬಗ್ಗೆ ರಾಮನಗರದಲ್ಲಿನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿಗೆ ಬೆಂಬಲ ನೀಡುವುದಕ್ಕಿಂತಲೂ ಬೊಮ್ಮಾಯಿ ಅವರ ಜೊತೆಗಿನ ಸುದೀಪ್ ಆತ್ಮೀಯತೆ ಚಿಕ್ಕ ವಯಸ್ಸಿನಿಂದಲೂ ಇದೆ. ಹೀಗಾಗಿ ಅವರಿಗೆ ಗೌರವ ನೀಡಿ ಬೆಂಬಲಿಸುವುದಾಗಿ ಹೇಳಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.
ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ. ನಮಗೆ ಪಂಚರತ್ನ ಯೋಜನೆಯೇ ಸ್ಟಾರ್ ಯೋಜನೆಗಳು. ನಮ್ಮ ಪಕ್ಷದ ಕಾರ್ಯಕರ್ತರೇ ಸ್ಟಾರ್ ಪ್ರಚಾರಕರು. ದೇವೇಗೌಡರ 60 ವರ್ಷದ ರಾಜಕಾರಣ, ಅಭಿವೃದ್ಧಿ ಕೊಡುಗೆಯನ್ನು ಜನ ಮರೆತಿಲ್ಲ. ಹೀಗಾಗಿ ನಾವು ಯಾವುದೇ ಸಿನಿಮಾ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ ಎಂದರು.
ರಾಜ್ಯಕ್ಕೆ ಪ್ರಧಾನಿ ಮೋದಿ ಹಾಗೂ ರಾಹುಲ್ ಗಾಂಧಿ ಆಗಮನ ವಿಚಾರ ಕುರಿತು ಮಾತನಾಡಿದ ಅವರು, ಬಿಜೆಪಿಯವರು (BJP) 3ವರ್ಷದಲ್ಲಿ ಅಭಿವೃದ್ಧಿ ಮಾಡಿರುವ ಬಗ್ಗೆ ಮಾತನಾಡಲು ಏನೂ ಇಲ್ಲ. ಹಾಗಾಗಿ ಮೋದಿಯವರನ್ನು ಕರೆಸಿ ಪ್ರಚಾರ ಮಾಡುತ್ತಿದ್ದಾರೆ. ದೇಶದ ಪ್ರಧಾನಿಗಳ ಬಗ್ಗೆ ನನಗೆ ಗೌರವ ಇದೆ. ಆದರೆ ಪ್ರತಿ ಬಾರಿ ಮೋದಿ ಹೆಸರಿನಲ್ಲಿ ಮತ ಬರುತ್ತದೆ ಅಂತ ಭಾವನೆಯಲ್ಲಿರುವ ಬಿಜೆಪಿ ನಾಯಕರಿಗೆ ಈ ಬಾರಿ ನಿರಾಸೆಯಾಗಲಿದೆ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…