Featured

ಪಕ್ಷದ ಹಿತದೃಷ್ಟಿಯಿಂದ ಕುಮಾರಸ್ವಾಮಿ ಸಿಎಂ ಹುದ್ದೆಯ ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನವನ್ನೂ ವಹಿಸಿಕೊಳ್ಳುವುದು ಒಳ್ಳೆಯದು : ಎಚ್.ವಿಶ್ವನಾಥ್ -Vishwanews24

ಬೆಂಗಳೂರು,: ಜೆಡಿಎಸ್ ವರಿಷ್ಠ ದೇವೇಗೌಡರು ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕು. ಎಚ್‌.ಡಿ. ಕುಮಾರಸ್ವಾಮಿ ಸಿಎಂ ಹುದ್ದೆಯ ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನವನ್ನೂ ವಹಿಸಿಕೊಳ್ಳುವುದು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದು. ಈ ಹಿಂದೆ ಎಸ್‌ಎಂ ಕೃಷ್ಣ ಹಾಗೂ ದೇವರಾಜ ಅರಸ್ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದರು. ಮಧ್ಯಂತರ ಚುನಾವಣೆ ಯಾವಾಗಲೂ ಬೇಕಾದರೂ ಬರಬಹುದು ಎಂದು ನಮ್ಮ ನಾಯಕರು ಹೇಳುತ್ತಿದ್ದಾರೆ. ಜೆಡಿಎಸ್ ರಾಷ್ಟ್ರಮಟ್ಟದಲ್ಲಿ ಬೆಳೆಸಬೇಕು ಎಂದು ಜೆಡಿಎಸ್ ಶಾಸಕ ಎಚ್.ವಿಶ್ವನಾಥ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

” ಇಬ್ಬರು ಪಕ್ಷೇತರರನ್ನು ಮಂತ್ರಿಯನ್ನಾಗಿ ಮಾಡಿದ್ದಾರೆ. ಆದರೆ, ಅವರಿಗೆ ಖಾತೆಯನ್ನು ಹಂಚಿಕೆ ಮಾಡಲಾಗಿಲ್ಲ. ಅವರನ್ನು ಅವಮಾನಿಸಲಾಗಿದೆ. ಅವರಿಗೆ ಆದಷ್ಟು ಬೇಗನೆ ಖಾತೆ ಹಂಚಬೇಕಾಗಿದೆ.

ಕಾಂಗ್ರೆಸ್‌ನ ಹಿರಿಯ ನಾಯಕ ರೋಷನ್ ಬೇಗ್‌ರನ್ನು ಎಐಸಿಸಿ ಅಮಾನತುಗೊಳಿಸಿದ್ದು ಸರಿಯಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ನ್ನು ಬೆಂಬಲಿಸಿದ್ದರು. ಕಾಂಗ್ರೆಸ್‌ನಲ್ಲಿದ್ದಾಗ ನನ್ನನ್ನೂ ಇದೇ ರೀತಿ ಮಾಡುವ ಸಾಧ್ಯತೆಯಿತ್ತು. ಹಾಗಾಗಿ ನಾನು ಕಾಂಗ್ರೆಸ್ ಪಕ್ಷದಿಂದ ಹೊರಬಂದಿದ್ದೆ. ಒಬ್ಬ ನಾಯಕನನ್ನು ರಾಜಕೀಯವಾಗಿ ಕೊಲ್ಲುವುದು ಸರಿಯಲ್ಲ.” ಎಂದು ವಿಶ್ವನಾಥ್ ಹೇಳಿದ್ದಾರೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

16 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

16 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

16 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

17 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

17 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

17 hours ago